i
ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಅನುಷ್ಠಾನಕ್ಕೆ ಸಿದ್ದತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಅನುಷ್ಠಾನಕ್ಕೆ 2023 -24 ನೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸರ್ಕಾರ ಸೂಚನೆ ನೀಡಿದೆ.
ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಉಳಿಕೆಯಾದ ಅಕ್ಕಿ, ಗೋಧಿ, ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ ಮತ್ತು ಹಾಲಿನ ಪುಡಿ ಸೇರಿದಂತೆ ಮತ್ತಿತರೆ ಪದಾರ್ಥಗಳನ್ನು ಪರಿಶೀಲಿಸಿ ಅವಧಿ ಮುಗಿದ ಪದಾರ್ಥಗಳಿದ್ದರೆ ಬಿಸಿಯೂಟಕ್ಕೆ ಬಳಕೆ ಮಾಡಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಈಗಾಗಲೇ ಶಾಲೆಗಳಲ್ಲಿರುವ ಆಹಾರ ಪದಾರ್ಥಗಳು ಕಳಪೆಯಾಗಿ ಹುಳ ತಿಂದ ಹಾಗೂ ಗುಣಮಟ್ಟ ಹಾಳಾಗಿದ್ದರೆ, ಕೊಳೆತ ಸ್ಥಿತಿಯಲ್ಲಿದ್ದರೆ ಅಂತಹ ಆಹಾರ ಪದಾರ್ಥಗಳನ್ನು ಬೇರ್ಪಡಿಸಿ ಹೊರಹಾಕುವಂತೆ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್. ವಿಶಾಲ್ ಸುತ್ತೋಲೆ ಹೊರಡಿಸಿದ್ದಾರೆ.