i
ಹಿರಿಯೂರು ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಮನೆ ಮೇಲೆ ಐಟಿ ದಾಳಿ ಹಿಂದೆ ವಿರೋಧಿಗಳ ಕೈವಾಡದ ಶಂಕೆ?…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಮನೆ ಮೇಲೆ ಐಟಿ ದಾಳಿ ಮಾಡಿ ಮಹತ್ವದ ದಾಖಲಾತಿಗಳನ್ನು ವಶ ಪಡಿಸಿಕೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 20ಕ್ಕೂ ಹೆಚ್ಚಿನ ಅಧಿಕಾರಿಗಳು ಹಿರಿಯೂರು ತಾಲೂಕಿನ ಧರ್ಮಪುರ ಹೋಬಳಿಯ ಮುಂಗಸವಳ್ಳಿ ಗ್ರಾಮದಲ್ಲಿರುವ ತೋಟದ ಮನೆಗೆ ದಾಳಿ ಮಾಡಿದ್ದಾರೆ. ಕಳೆದ ರಾತ್ರಿಯಲ್ಲಾ ತಪಾಸಣೆ ಮಾಡಿರುವ ಅಧಿಕಾರಿಗಳು ಶನಿವಾರ ತಪಾಸಣೆಯನ್ನು ಮುಂದುವರೆಸಿದ್ದಾರೆ.
ಐಟಿ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ಅಭ್ಯರ್ಥಿ ಎಂ.ರವೀಂದ್ರಪ್ಪ, ಪತ್ನಿ ಲತಾ ರವೀಂದ್ರಪ್ಪ ಸೇರಿದಂತೆ ಕುಟುಂಬಸ್ಥರು ಚುನಾವಣಾ ಪ್ರಚಾರಕ್ಕೆ ತೆರಳಿದ್ದರು ಎನ್ನಲಾಗಿದೆ.
ಐಟಿ ಅಧಿಕಾರಿಗಳು ತೋಟದ ಮನೆಯ ಗೇಟ್ ಬಂದ್ ಮಾಡಿ ಇಡೀ ತೋಟದ ಮನೆ, ಡೈರಿ ಫಾರಂ, ಕಚೇರಿ, ದೇವಸ್ಥಾನ ಇತ್ಯಾದಿ ಸ್ಥಳಗಳಲ್ಲಿ ತೀವ್ರ ತಪಾಸಣೆ ಮಾಡುತ್ತಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಜೆಡಿಎಸ್ ಅಭ್ಯರ್ಥಿ ರವೀಂದ್ರನವರು ನಾಮಪತ್ರ ಸಲ್ಲಿಸುವ ವೇಳೆ ಸೇರಿದ್ದ ಸಹಸ್ರ ಸಹಸ್ರ ಸಂಖ್ಯೆಯ ಜನ ಸಾಗರಕ್ಕೂ ಐಟಿ ಅಧಿಕಾರಿಗಳ ದಾಳಿಗೂ ಸಂಬಂಧ ಇದೆ ಎನ್ನಲಾಗುತ್ತಿದ್ದು ಈ ದಾಳಿಯ ಹಿಂದೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಕೈವಾಡ ಇದೆ ಎನ್ನುವ ಆರೋಪ ಕೇಳಿಬಂದಿದೆ.