i
ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಮದುವೆ ಬಸ್…
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮದುವೆಗೆ ಹೊರಟಿದ್ದ ಬಸ್ಸೊಂದು ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ಜರುಗಿದೆ.
ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಈ ಘಟನೆ ಮಂಡ್ಯ ಜಿಲ್ಲೆಯ ಗಣಂಗೂರಿ ಬಳಿಯ ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಮದುವೆಗೆ ಹೊರಟಿದ್ದರು. ಬಸ್ ನಲ್ಲಿ ಸುಮಾರು 30 ಜನ ಪ್ರಯಾಣ ಮಾಡುತ್ತಿದ್ದರು. ಆರಂಭದಲ್ಲಿ ಬಸ್ ನಲ್ಲಿ ಸ್ವಲ್ಪ ಹೊಗೆ ಕಾಣಿಸಿಕೊಂಡಿದೆ. ಜನ ಬಸ್ ನಿಲ್ಲಿಸಲು ಹೇಳಿ, ಕೆಳಗೆ ಇಳಿದಿದ್ದಾರೆ. ಜನ ಇಳಿದು ನೋಡುವಷ್ಟರಲ್ಲಿ ಇಡೀ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟಕ್ಕೆ ಎಲ್ಲರು ಬಸ್ ನಿಂದ ಕೆಳಗೆ ಇಳಿದಿದ್ದರು. ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ. ಬಸ್ ಸಂಪೂರ್ಣ ಭಸ್ಮವಾಗಿದೆ.