i
ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಸಿಂಧುಗೆ ಸಿಎಂ ಕಚೇರಿಯಿಂದ ಪೋನ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಸಿಎಂ ಬೊಮ್ಮಾಯಿ ಕಚೇರಿಯಿಂದ ಪೋನ್ ಕರೆಗಳು ಹೋಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಯತ್ನ ನಡೆಯುತ್ತಿದೆ. ಸಿಎಂ ಕಚೇರಿ, ಸಿಎಂ ಲೀಗಲ್ ಟೀಂನಿಂದ ಅಧಿಕಾರ ದುರ್ಬಳಕೆ ಮಾಡಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಅಫಿಡವಿಟ್ ಡೌನ್ಲೋಡ್ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಸಿಎಂ ಬೊಮ್ಮಾಯಿಯೇ ನೇರಹೊಣೆ , ಸಿಎಂ ಕಚೇರಿಯ ಕಾಲ್ ಡೀಟೇಲ್ಸ್ ತೆಗೆಯಬೇಕು ಈ ಬಗ್ಗೆ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು ಎಂದು ಡಿಕೆಶಿ ಆಗ್ರಹ ಮಾಡಿದ್ದಾರೆ.