i
ಹಿರಿಯೂರು ಆಜಾದ್ ನಗರದ 300ಕ್ಕೂ ಹೆಚ್ಚಿನ ಮುಖಂಡರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಆಜಾದ್ ನಗರದಲ್ಲಿ 300ಕ್ಕೂ ಹೆಚ್ಚಿನ ಮುಖಂಡರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೊಂಡರು.
ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ ಯಶೋಧರ, ಜಿಲ್ಲಾಧ್ಯಕ್ಷ ಪಿಲಾಜನಹಳ್ಳಿ ಎಂ.ಜಯಣ್ಣ, ಮಾಜಿ ಜೆಡಿಎಸ್ ಅಧ್ಯಕ್ಷ ಶಿವ ಪ್ರಸಾದ್ ಗೌಡ, ಹಾಲಿ ಅಧ್ಯಕ್ಷ ಹನುಮಂತರಾಯ, ರವೀಂದ್ರಪ್ಪನವರ ಪತ್ನಿ ಲತಾ ರವೀಂದ್ರಪ್ಪ, ವೈ.ಆರ್.ಗೌಡ ಮತ್ತಿತರ ನಾಯಕರುಗಳ ಸಮ್ಮುಖದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ ಪಿಂಟು, ಮುಬಾರಕ್ ಸೇರಿದಂತೆ 300ಕ್ಕೂ ಹೆಚ್ಚಿನ ಮುಖಂಡರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಹಿರಿಯೂರು ನಗರ ಸೇರಿದಂತೆ ಹಿರಿಯೂರು ಕ್ಷೇತ್ರದಲ್ಲಿರುವ ಎಲ್ಲ ಮುಸ್ಲಿಂ ಬಡಾವಣೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಹೆಚ್ಚಿನ ಲೀಡ್ ತಂದು ಕೊಡಲಿದ್ದೇವೆಂದು ಮುಸ್ಲಿಂ ಸಮಾಜದ ಕಾರ್ಯಕರ್ತರು ಹಾಗೂ ಮುಖಂಡರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ ಜೆಡಿಎಸ್ ಮುಖಂಡರು, ಮುಸ್ಲಿಂ ಸಮಾಜವನ್ನು ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡಿದೆ. ಆದರೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಮುಸ್ಲಿಂ ಸಮಾಜಕ್ಕೆ ವಿಶೇಷ ಮೀಸಲಾತಿ ಅಂದರೆ ಶೇ.4 ರಷ್ಟು ಮೀಸಲಾತಿ ನೀಡಿದೆ. ಆ ಮೀಸಲಾತಿಯನ್ನು ಈಗ ಬಿಜೆಪಿ ರದ್ದು ಮಾಡಿದೆ. ಜೊತೆಗೆ ಜೆಡಿಎಸ್ ಪಕ್ಷ ರಾಜ್ಯಾಧ್ಯಕ್ಷ ಸ್ಥಾನವನ್ನು ಮುಸ್ಲಿಂರಿಗೆ ನೀಡಿದೆ. ಅಷ್ಟೇ ಅಲ್ಲ ರಾಜ್ಯದ 22 ವಿಧಾನಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಸಮಾಜಕ್ಕೆ ಜೆಡಿಎಸ್ ಟಿಕೆಟ್ ನೀಡುವ ಮೂಲಕ ಪಕ್ಷದ ಬದ್ದತೆಯನ್ನು ಪ್ರದರ್ಶಿಸಿದೆ, ಆದರೆ ಕಾಂಗ್ರೆಸ್ ಪಕ್ಷ ಕೇವಲ 18 ಸ್ಥಾನಗಳನ್ನು ಮುಸ್ಲಿಂ ಸಮಾಜಕ್ಕೆ ನೀಡುವ ಮೂಲಕ ವೋಟ್ ಬ್ಯಾಂಕ್ ಮಾಡಿಕೊಂಡಿದೆ ಎಂದು ಅವರು ದೂರಿದರು.
ಬಿಜೆಪಿ ಕಾಂಗ್ರೆಸ್ ನಿಂದ ಹಿರಿಯೂರು ಮತ್ತು ನಗರ ಅಭಿವೃದ್ಧಿ ಕಾಣದು ಎಂದು ಬೇಸತ್ತಿದ್ದಾರೆ. ಇದಕ್ಕೆ ಒಂದೇ ಪರಿಹಾರ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಅಧಿಕಾರ ಕೊಡಿ ಎಂದು ಮನವಿ ಮಾಡಿಕೊಂಡರು.