i
ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ-ಡಾ.ಪರಮೇಶ್ವರ್…
ಚಂದ್ರವಳ್ಳಿ ನ್ಯೂಸ್, ಕೊರಟಗೆರೆ:
ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ, ಗೌಡರ ಮೇಲೆ ನನಗೆ ಅಪಾರ ಗೌರವವಿದೆ. ತುಮಕೂರಿನ ನನ್ನ ಕ್ಷೇತ್ರದಲ್ಲಿ ಅವರಿಗೆ ಮುನ್ನಡೆ ನೀಡಿದೆ. ಇಂತಹ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಶಾಸಕ ಡಾ.ಜಿ.ಪರಮೇಶ್ವರ ಸ್ಪಷ್ಟ ಪಡಿಸಿದರು.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಸೋಲಿಸಿದ್ದು ನಾನಲ್ಲ. ನನ್ನ ಕ್ಷೇತ್ರದಲ್ಲಿ ಅವರಿಗೆ ಹೆಚ್ಚಿನ ಮುನ್ನಡೆ ನೀಡಿದ್ದೇವೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ 2019 ರ ಲೋಕಸಭೆ ಚುನಾವಣೆ ವೇಳೆ ತುಮಕೂರು ಜಿಲ್ಲೆಯನ್ನ ಆರಿಸಿಕೊಂಡ ಸ್ಪರ್ಧೆ ಮಾಡಿದ್ದರು. ಜೆಡಿಎಸ್ ಪಕ್ಷದ ಶಾಸಕರಿರುವ ಕ್ಷೇತ್ರಗಳಲ್ಲೇ ಕಡಿಮೆ ಮತಗಳು ಬಂದಿವೆ. ಅದಕ್ಕೆಲ್ಲ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದರು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಕಣ್ಣೀರು ಹಾಕಿಸುವ ಕೆಲಸ ಮಾಡಿಲ್ಲ. ಜೆಡಿಎಸ್ ಪಕ್ಷದ ನಾಯಕರ ಆಂತರಿಕ ಕಲಹದಿಂದ ಅವರ ಶಾಸಕರೇ ಇರುವಂತಹ ಕ್ಷೇತ್ರಗಳಲ್ಲಿ ಹೆಚ್ಚಿನ ಲೀಡ್ ಬಂದಿಲ್ಲ. ಅದರ ಬಗ್ಗೆ ಸಿಎಂ ಇಬ್ರಾಹಿಂ ಅವರು ಮಾತನಾಡಬೇಕಿದೆ ಎಂದು ಹೇಳಿದರು.