i
ಅಗತ್ಯ ಸೇವೆಗಳ ನೌಕರ ಮತದಾರರಿಗೆ ವೇತನ ಸಹಿತ ರಜೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 ಸಂಬಂಧ ಅಗತ್ಯ ಸೇವೆಗಳ ಇಲಾಖೆಯಡಿ ಬರುವ ಗೈರು ಹಾಜರಿ ಮತದಾರರಾದ, ಅಧಿಕಾರಿ ಹಾಗೂ ಸಿಬ್ಬಂದಿಯಲ್ಲಿ ಅಂಚೆ ಮತದಾನಕ್ಕೆ ಆಯ್ಕೆ ಮಾಡಿಕೊಂಡ ಅರ್ಹ ಮತದಾರರು ವೇತನ ಸಹಿತ ರಜೆ ಪಡೆಯಲು ಅರ್ಹರಿರುತ್ತಾರೆ.
ಮೇ.2 ರಿಂದ ಮೇ.4 ವರೆಗೆ ಅಂಚೆ ಮತದಾನ ಕೇಂದ್ರಗಳಲ್ಲಿ ಮತದಾನ ಮಾಡಲು ತೆರಳುವ ದಿನಾಂಕದಂದು ಅಗತ್ಯ ಸೇವೆಗಳ ನೌಕರರು ಈ ರಜೆಯನ್ನು ಪಡೆಯಬಹುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.