i
ಬಿಜೆಪಿ ಮತ್ತು ಕಾಂಗ್ರೆಸ್ ತೊರೆದ ಮುಖಂಡರು ಜೆಡಿಎಸ್ ಸೇರ್ಪಡೆ…
ಪಕ್ಷ ಬಿರುಸಿನ ಪ್ರಚಾರ ಮಾಡಿದ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರು ಭಾನುವಾರ ಹಿರಿಯೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ಮಾಡಿದರು.
ತಾಲೂಕಿನ ಗೌಡನಹಳ್ಳಿ ಗ್ರಾಮದ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಸಂದರ್ಭದಲ್ಲಿ ಗ್ರಾಮಸ್ಥರು ಆತ್ಮೀಯವಾಗಿ ಎಂ.ರವೀಂದ್ರಪ್ಪ ಅವರನ್ನ ಸ್ವಾಗತಿಸಿ ಹಾಗೂ ಪ್ರಚಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಿ.ಯಶೋಧರ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಪಿಲಾಜನಹಳ್ಳಿ ಜಯಣ್ಣ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎನ್.ಹನುಮಂತಪ್ಪ, ಮುಖಂಡರಾದ ಶಿವಪ್ರಸಾದ್ ಗೌಡ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಶಿವಶಂಕರ್, ಜೆ ಜೆ ಹಳ್ಳಿ ಮಂಜುನಾಥ, ರಂಗನಾಥ್, ಚಿಲ್ಲಹಳ್ಳಿ ಶಿವಣ್ಣ, ರಮೇಶ್ ಸೇರಿದಂತೆ ಮತ್ತಿತರ ಕಾರ್ಯಕರ್ತರು, ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.
ಆದಿವಾಲ ಫಾರಂ- ಆದಿವಾಲ ಫಾರಂ ಗ್ರಾಮದ ಅನೇಕ ಮುಖಂಡರು ಬಿಜೆಪಿ ಮತ್ತು ಕಾಂಗ್ರೆಸ್ ತೊರೆದು ಮುಖಂಡರಾದ ಯಶೋದರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಶಂಕರ್, ನಂದಿಹಳ್ಳಿ ಗಿರಿಜಣ್ಣ, ಎಚ್.ಆರ್.ತಿಮ್ಮಯ್ಯ, ಗುಣಶೇಖರ್, ಗ್ರಾಮ ಪಂಚಾಯತಿ ಅಧ್ಯಕ್ಷ ಕಿರಣ್ ಪಟ್ರಿಹಳ್ಳಿ, ನಂದಿಹಳ್ಳಿ ಶ್ರೀಧರ್ ಇನ್ನು ಅನೇಕ ಮುಖಂಡರು ಹಾಜರಿದ್ದರು.