i
ಇಬ್ಬರು ಅಧಿಕಾರಿಗಳ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದ KC ವೀರೇಂದ್ರ ಪಪ್ಪಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ KC ವೀರೇಂದ್ರ ಪಪ್ಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. DDPI ರವಿಶಂಕರ್ ರೆಡ್ಡಿ, CPI ಬಾಲಚಂದ್ರ ನಾಯ್ಕ್ ವಿರುದ್ದ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ BJP ಪರ ಕೆಲಸ ಮಾಡುತ್ತಿದ್ದಾರೆ ಎಂದು ದೂರು ನೀಡಲಾಗಿದೆ. ಮುಖ್ಯ ಚುನಾವಣಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದ ಪಪ್ಪಿ ಒತ್ತಾಯಿಸಿದ್ದಾರೆ.
ಅದೇ ರೀತಿ ಡಿಡಿಪಿಐ ರವಿಶಂಕರ್ ನಾಲ್ಕು ವರ್ಷದಿಂದ ದುರ್ಗದಲ್ಲಿ ಇದ್ದು ಬಿಜೆಪಿ ಮತ ಹಾಕುವಂತೆ ಶಿಕ್ಷಕರಿಗೆ ಒತ್ತಾಯ ಮಾಡುತ್ತಿದ್ದಾರೆ ಎನ್ನುವ ಆರೋಪ ಮಾಡಿ ದೂರು ನೀಡಲಾಗಿದೆ. ಡಿಡಿಪಿಐ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿರುವ ಪಪ್ಪಿ ಇತ್ತ ಸಿಪಿಐ ವಿರುದ್ದವೂ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಕೂಡಲೇ ವರ್ಗಾವಣೆ ಮಾಡುವಂತೆ ದಾವಣಗೆರೆ ಐಜಿಪಿಗೆ ಪತ್ರ ಬರೆದ ಪಪ್ಪಿ ಒತ್ತಾಯಿಸಿದ್ದಾರೆ.