i
ಹಿರಿಯೂರು ಕ್ಷೇತ್ರದ ಹಿಂದಿನ ಹತ್ತು ವರ್ಷಗಳ ಕರಾಳ ದಿನಗಳನ್ನೊಮ್ಮೆ ಮನಸ್ಸಿನಲ್ಲಿ ನೆನೆದುಕೊಳ್ಳಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನಲ್ಲಿ ತೋಟಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಲು ಮಾಜಿ ಸಚಿವರು, ಅಂದು ಅವರು ಕೈಗೊಂಡ ಅವೈಜ್ಞಾನಿಕ ತೀರ್ಮಾನ ಕಾರಣ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.
ಅವರು ಹಿರಿಯೂರು ನಗರದ ವಿವಿಧ ವಾರ್ಡ್ ಗಳಲ್ಲಿ ಬಿರುಸಿನ ಪ್ರಚಾರ ಮಾಡಿ ಮತಯಾಚನೆ ಮಾಡಿದ ನಂತರ ಮಾತನಾಡಿ, ಆಯ್ಕೆಯಾದ ಜನಪ್ರತಿನಿಧಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದ ಜನರ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯ. ಆ ಕೆಲಸವನ್ನು ನಾನು ಐದು ವರ್ಷದಲ್ಲಿ ಮಾಡಿದ್ದೇನೆ. ತಾಲೂಕಿನಲ್ಲಿ ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಇಂದು ಅಂತರ್ಜಲ ಮಟ್ಟ ವೃದ್ಧಿಯಾಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ಕೆಲಸ ನೋಡಿ ನನಗೆ ಮತ ಹಾಕಿ, ಹಿಂದಿನ ಹತ್ತು ವರ್ಷಗಳ ಕರಾಳ ದಿನಗಳನ್ನೊಮ್ಮೆ ಮನಸ್ಸಿನಲ್ಲಿ ನೆನೆದುಕೊಳ್ಳಿ ಎಂದು ಅವರು ಮನವಿ ಮಾಡಿದರು.
ಮನೆಗೆ ಕಳುಹಿಸಿ ಮಾಜಿ ಸಚಿವ ಸುಧಾಕರ್ ಅವರನ್ನು ವಿಧಾನಸೌಧಕ್ಕೆ ಕಳುಹಿಸಲು ಕಾಂಗ್ರೆಸ್ ಕಾರ್ಯಕರ್ತರು ಪಣ ತೊಡಬೇಕು ಎಂದು ಕಾಂಗ್ರೆಸ್ ಪಕ್ಷದ ಎಸ್ಸಿ ಸೆಲ್ ಅಧ್ಯಕ್ಷ ಜಿ.ಎಲ್.ಮೂರ್ತಿಕರೆ ನೀಡಿದರು.
ತಾಲೂಕಿನ ಆಲೂರು ಕನಕರಾಜ್ ರವರ ತೋಟದಲ್ಲಿ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಸಭೆಗೆ ಕಸವನಹಳ್ಳಿ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದೀರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಧಾಕರ್ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ವಿಧಾನಸೌಧಕ್ಕೆ ಕಳಿಸಿಕೊಡಬೇಕೆಂದು ಅವರು ಮನವಿ ಮಾಡಿದರು.