i
ಜಿಲ್ಲಾ ಗೊಲ್ಲರ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಡಿ ಶಿವಣ್ಣ ಕಾಂಗ್ರೆಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: Mla election hiriyu
ಚಿತ್ರದುರ್ಗ ಜಿಲ್ಲಾ ಜೆ ಡಿ ಎಸ್ ಉಪಾದ್ಯಕ್ಷ, ಜಿಲ್ಲಾ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾದ್ಯಕ್ಷ ಹಾಗೂ ಚಿತ್ರದುರ್ಗ ಜಿಲ್ಲಾ ಗೊಲ್ಲರ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಡಿ ಶಿವಣ್ಣನವರು ಕಾಡುಗೊಲ್ಲ ಸಂಘದ ಪದಾಧಿಕಾರಿಗಳ ಯಾದವ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಡಿ ಸುದಾಕರ್ ಸೇರ್ಪಡೆಯಾದರು. ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ ಶಿವು ಯಾದವ್ ನೇತ್ರತ್ವದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಡಿ ಸುದಾಕರ್ ರವರು ಕಾಂಗ್ರೆಸ್ ಪಕ್ಷದ ಶಾಲು ಹಾಕುವುದರ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಮಾತನಾಡಿ ಸುಧಾಕರ್, ಶಿವಣ್ಣನವರ ಸೇರ್ಪಡೆ ಕಾಂಗ್ರೆಸ್ ಪಕ್ಷಕ್ಕೆ ಬೀಮ ಬಲಬಂದಂತಾಗಿದೆ ಮತ್ತು ಹಿರಿಯೂರು ತಾಲ್ಲೂಕಿನಲ್ಲಿ ಪಕ್ಷ ಬಲವರ್ಧನೆಗೆ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಮಾಜಿ ಸಚಿವ ಸುದಾಕರ್ ತಿಳಿಸಿದರು.