i
ರೈತರು ಕಾರ್ಮಿಕರು, ಬಡವರ ಬದುಕು ಹಸನಾಗಬೇಕಾದರೆ ಜೆಡಿಎಸ್ ಪಕ್ಷಕ್ಕೆ ಮತ ನೀಡಿ- ಅಭ್ಯರ್ಥಿ ರವೀಂದ್ರಪ್ಪ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕರ್ನಾಟಕ ರಾಜ್ಯ ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ, ರೈತರ ಬದುಕು ಹಸನಾಗಬೇಕಾದರೆ ಚುನಾವಣೆಯಲ್ಲಿ ಜನಪರ ಹಾಗೂ ರೈತಪರ ಕಾಳಜಿ ಉಳ್ಳ ಹೆಚ್.ಡಿ.ಕುಮಾರಸ್ವಾಮಿಯವರ ನೇತೃತ್ವದ ಜೆಡಿಎಸ್ ಪಕ್ಷಕ್ಕೆ ತಮ್ಮ ಅಮೂಲ್ಯವಾದ ಮತ ನೀಡುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ತಾಲ್ಲೂಕಿನ ಹೇಮದಳ, ಜಡೆಗೊಂಡನಹಳ್ಳಿ, ಹೊಸಐನಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಪರವಾಗಿ ಮತಯಾಚನೆ ಮಾಡಿ ನಂತರ ಅವರು ಮಾತನಾಡಿದರು.
ಗ್ರಾಮದ ಜನರು ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪರವರಿಗೆ ಪುಷ್ಪಮಾಲೆ ಹಾಕಿ ವಾದ್ಯ ಮೇಳದೊಂದಿಗೆ ಅದ್ದೂರಿಯಾಗಿ ಗ್ರಾಮಕ್ಕೆ ಸ್ವಾಗತಿಸಿದರು. ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ ನೀಡುವುದಾಗಿ ಗ್ರಾಮದ ಜನರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎನ್.ಹನುಮಂತರಾಯಪ್ಪ, ಹಿರಿಯ ಮುಖಂಡರಾದ ಶಂಕರಮೂರ್ತಿ, ಬಿದರಿಕೆರೆ ಚಿದಾನಂದ, ದಾದಾಪೀರ್, ಜಲ್ದಪ್ಪ, ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.