i
ಕಾಂಗ್ರೆಸ್ ಗೆ ಮಾಡು ಇಲ್ಲವೇ ಮಡಿ ಚುನಾವಣೆ–ಸಿಎಂ ಬೊಮ್ಮಾಯಿ…
ಚಂದ್ರವಳ್ಳಿ ನ್ಯೂಸ್, ಹಾವೇರಿ(ಹಾನಗಲ್):
ಕಾಂಗ್ರೆಸ್ ಗೆ ಇದು ಕೊನೆ ಚುನಾವಣೆ. ಅವರು ಸೋತರೆ ಅವರು ಸೀದಾ ಮನೆಗೆ ಹೋಗಬೇಕು. ಅವರಿಗೆ ಇದು ಮಾಡು ಇಲ್ಲವೇ ಮಡಿ ಪರಿಸ್ಥಿತಿ. ಆದರೆ ಅವರಿಗೆ ಇದು ಮಡಿಯುವ ಚುನಾವಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
ಅವರು ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.
ಈ ಬಾರಿ ಬಿಜೆಪಿ ಸುನಾಮಿ ಕರ್ನಾಟಕದಲ್ಲಿದೆ. ಹಾನಗಲ್ ತಾಲ್ಲೂಕು ಯಾವಾಗಲೂ ರಾಜಕೀಯ ಪ್ರಜ್ಞೆ ಇರುವ ಕ್ಷೇತ್ರ. ಇಲ್ಲಿ ಆರಿಸಿ ಬರುವುದು ಪ್ರಜಾಪ್ರಭುತ್ವದ ಪರೀಕ್ಷೆ. ನಮ್ಮ ಉದಾಸಿ ಅಣ್ಣ ಇದ್ದಾಗ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಈಗ ಇದನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು. ಡಬಲ್ ಎಂಜಿನ್ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಬಹಳ ದೊಡ್ಡ ಕೊಡುಗೆ ನೀಡಿದೆ. ಉದಾಸಿ ಅವರು 2018 ಗೆದ್ದ ಮೇಲೆ ಇಲ್ಲಿನ ಕೆರೆ ತುಂಬಿಸುವಂತೆ ಬಹಳವಾಗಿ ಹೇಳುತ್ತಿದ್ದರು. ಈ ಮೂಲಕ 4 ನೀರಾವರಿ ಯೋಜನೆಗಳನ್ನು ಜಾರಿಗೆ ತಂದರು.