i
ಭ್ರಷ್ಟ, ಜನ ವಿರೋಧಿ ಬಿಜೆಪಿ ಸರ್ಕಾರ ತೊಲಗಿಸಲು ಯುವಕರಿಂದ ಮಾತ್ರ ಸಾಧ್ಯ:ಸುಧಾಕರ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಾಂಗ್ರೆಸ್ ಪಕ್ಷದ ಹಲವಾರು ನಾಯಕರು ಯುವ ಕಾಂಗ್ರೆಸ್ ನಿಂದ ಬಂದಂತವರು, ಈ ಯುವ ಕಾಂಗ್ರೆಸ್ ಅತ್ಯಂತ ಬಲಿಷ್ಠ ಶಕ್ತಿಯಾಗಿದ್ದು, ರಾಜ್ಯದಲ್ಲಿ ಇರುವ ಭ್ರಷ್ಟ ಹಾಗೂ ಜನವಿರೋಧಿ ಬಿಜೆಪಿ ಸರ್ಕಾರವನ್ನು ತೊಲಗಿಸಲು ಕೇವಲ ಯುವಕರಿಂದ ಮಾತ್ರ ಸಾಧ್ಯವಾಗಿದ್ದು, ಪಕ್ಷದ ಕಾರ್ಯಕರ್ತರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಕ್ಷದ ಸಾಧನೆಗಳನ್ನು ಮನೆ ಮನೆಗೆ ತಿಳಿಸಿ ಕಾಂಗ್ರೆಸ್ ಸರ್ಕಾರ ಬಂದರೆ ೨೦೦ ಯೂನಿಟ್ ವಿದ್ಯುತ್ ಉಚಿತ ಪದವೀಧರ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ೩ ಸಾವಿರ ರೂ ಹಣ, ಮನೆಯ ಯಜಮಾನಿಗೆ ೨ ಸಾವಿರ ರೂ ಹಣ, ಕುಟುಂಬದ ಪ್ರತಿ ಸದಸ್ಯರಿಗೆ ಉಚಿತವಾಗಿ ೧೦ ಕೆಜಿ ಅಕ್ಕಿ,ಹೆಣ್ಣುಮಕ್ಕಳಿಗೆ ಬಸ್ ಪ್ರಯಾಣ ಉಚಿತ ಈ ಎಲ್ಲಾ ಕೊಡುಗೆಗಳು ಕಾಂಗ್ರೆಸ್ ಪಕ್ಷದ ಗೆಲುವಿನಿಂದ ಸಾಧ್ಯ ಎಂಬುದನ್ನು ಜನರಿಗೆ ಮನವರಿಕೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಚತ್ತೀಸ್ ಘಡ ರಾಜ್ಯಸಭಾ ಸದಸ್ಯ ರಂಜಿತ, ರಂಜನ್ ಎಐಸಿಸಿ ಅದಿವಾಸಿ ಅಧ್ಯಕ್ಷ ಶಿವಾಜಿರಾವ್, ಯುವ ಕಾಂಗ್ರೆಸ್ ಉಸ್ತುವಾರಿ ಅಮಿತ್ ಪಾಠನೀಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಖಾದಿ ಜೆ ರಮೇಶ್, ಈರಲಿಂಗೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ಸಿದ್ದೇಶ್, ರಫೀಕ್ ಅಹ್ಮದ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.