i
ಹಿರಿಯೂರು ನಗರದಲ್ಲಿ ಬಿರುಸಿನ ಪ್ರಚಾರ ಮಾಡಿದ ಜೆಡಿಎಸ್ ಅಭ್ಯರ್ಥಿ ಮತ್ತು ಮುಖಂಡರು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯೂರು ನಗರದ ವಿವಿಧ ವಾರ್ಡ್ ಗಳಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ರವೀಂದ್ರಪ್ಪ ಅವರು ಭರ್ಜರಿ ಪ್ರಚಾರ ಮಾಡಿದರು.
ಹಿರಿಯೂರು ನಗರದ 1ರಿಂದ 5 ವಾರ್ಡ್ ವರೆಗೆ ಮತ್ತು ವಿವಿಧ ವಾರ್ಡ್ ಗಳ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ಹಾಗೂ ಮನೆ ಮನೆಗೆ ಮತಯಾಚನೆ ಮಾಡುವ ಮೂಲಕ ಗಮನ ಸೆಳೆದರು.
ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಯಶೋಧರ, ನಗರಸಭೆ ಸದಸ್ಯರಾದ ವೈಪಿಡಿ ದಾದಾಪೀರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಜಯಣ್ಣ, ಜೆಡಿಎಸ್ ಕಾರ್ಯಕರ್ತರಾದ ಲಕ್ಕಪ್ಪ, ಓಂಕಾರಪ್ಪ, ಓಬಳೇಶ್, ನವೀನ್ ಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಎನ್. ಹನುಮಂತರಾಯಪ್ಪ, ಶಿವಪ್ರಸಾದ್ ಗೌಡ, ಚಿಲ್ಲಹಳ್ಳಿ ಶಿವಣ್ಣ, ಎಂ.ಡಿ.ರಮೇಶ್, ಜೆಡಿಎಸ್ ನಗರ ಅಧ್ಯಕ್ಷ ಫಾರಕ್, ಮಂಜುನಾಥ್, ವೆಂಕಟೇಶ್, ಕೇಶವಮೂರ್ತಿ ಸೇರಿದಂತೆ ಮತ್ತಿತರರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದು ಜೆಡಿಎಸ್ ಮತ ಹಾಕುವಂತೆ ಮನವಿ ಮಾಡಿದರು.
ಪಕ್ಷ ಸೇರ್ಪಡೆ- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಶಿವಶಂಕರ್ ನೇತೃತ್ವದಲ್ಲಿ ಕೂಡ್ಲಹಳ್ಳಿ ಗ್ರಾಮದ ಷಣ್ಮುಖಪ್ಪ, ವಕೀಲರು ಸೇರಿದಂತೆ ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಮಾಸ್ಟರ್ ಓಂಕಾರಪ್ಪ ಮತ್ತಿತರ ಮುಖಂಡರು, ಕಾರ್ಯಕರ್ತರು ಇದ್ದರು.