i
ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡಿದ್ದರಿಂದ ಪುಕ್ಕಟೆ ಭರವಸೆಗಳನ್ನು ನೀಡುತ್ತಿದೆ- ವಿಜಯೇಂದ್ರ…
ಚಂದ್ರವಳ್ಳಿನ್ಯೂಸ್, ಹೊಸದುರ್ಗ:
ಕಾಂಗ್ರೆಸ್ ಪುಕ್ಕಟೆ ಭರವಸೆಗಳನ್ನು ನೀಡುವ ಮೂಲಕ ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಹೊರಟಿರುವುದು ಜನರ ವಿಶ್ವಾಸ ಕಳೆದುಕೊಂಡಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖಂಡ ವಿಜಯೇಂದ್ರ ತಿಳಿಸಿದರು.
ಅವರು ಪಟ್ಟಣದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ಪರವಾಗಿ ಬೈಕ್ ಶೋ ನಡೆಸಿ ಮತಯಾಚನೆ ಮಾಡಿ ಮಾತನಾಡಿದರು.
ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ಜನ ನಂಬದೆ ವಿಶ್ವಾಸ ಕಳೆದುಕೊಂಡಿದೆ. ಪುಕ್ಕಟೆ ಸಿಲಿಂಡರ್, ಅಕ್ಕಿ, ಇನ್ನಿತರ ಸಾಕಾ? ಪುಕ್ಕಟೆ ಭರವಸೆಗಳನ್ನು ನೀಡಿ ಅಧಿಕಾರ ಹಿಡಿಯುವ ಕನಸು ಕಂಡಿದ್ದಾರೆ ಎಂದು ಆರೂಪಿಸಿದರು. ಭಜರಂಗದಳವನ್ನು ನಿಷೇಧ ಮಾಡುವ ಭರವಸೆ ನೀಡುವ ಕಾಂಗ್ರೆಸ್ ಭಜರಂಗದಳದ ಸಂಘಟನೆ ಶ್ಲಾಘನೀಯವಾದದ್ದು ಎಂದರು. ತಾಲೂಕಿನ ಅಭಿವೃದ್ಧಿಗೆ ಬಿಜೆಪಿ ಹೆಚ್ಚಿನ ಅನುದಾನ ನೀಡಿದೆ. ಪ್ರಧಾನಿ ನರೇಂದ್ರ ಮೋದಿ, ಯಡಿಯೂರಪ್ಪ, ಬೊಮ್ಮಾಯಿ ಅವರು ಹೊಸದುರ್ಗ ತಾಲ್ಲೂಕಿನ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ.ಹಾಗಾಗಿ ಬಿಜೆಪಿ ನೀಡಿರುವ ಪ್ರಣಾಳಿಕೆ ಜನ ಸಾಮಾನ್ಯರಿಗೆ ತಲುಪುವ ಮೂಲಕ ನಾಡಿನ ಜನರ ಹಿತಾಸಕ್ತಿಗಳನ್ನು ಈಡೇರಿಸಲು ಡಬಲ್ ಇಂಜಿನ್ ಸರ್ಕಾರ ಬದ್ಧವಾಗಿದೆ.ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ಗೆ ಮತ ನೀಡುವ ಮೂಲಕ ಎರಡು ಬಾರಿ ಸೋತಿರುವ ಅವರಿಗೆ ಈ ಬಾರಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ಮಾತನಾಡಿ ಹೆಚ್ಚಿನ ಮತಗಳನ್ನು ಬಿಜೆಪಿಗೆ ನೀಡುವ ಮೂಲಕ ಚುನಾಯಿಸಬೇಕುಎಂದರು. ಬಿಜೆಪಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್, ಹೆಬ್ಬಳ್ಳಿ ಓಂಕಾರಪ್ಪ, ಹೆಬ್ಬಳ್ಳಿ ಮಲ್ಲಿಕಾರ್ಜುನ್, ರಂಗೇಶ್, ಹಾಜರಿದ್ದರು.