i
ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಶಾಸಕ ರಘುಮೂರ್ತಿ ಮರು ಆಯ್ಕೆ ಸೂಕ್ತ:ಮಹಲಿಂಗಪ್ಪ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಯಲ್ಲಿ ನಿರಂತರ ಪರಿಶ್ರಮವಹಿಸಿ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿ ಸಾರ್ವಜನಿಕರಿಗೂ ಕೂಡ ಸರ್ಕಾರದ ಸೌಲಭ್ಯಗಳನ್ನು ನೀಡಿದ ಶಾಸಕ ಟಿ.ರಘುಮೂರ್ತಿ ಮತ್ತೊಮ್ಮೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ಅವರನ್ನು ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ದಿ ಹೆಚ್ಚು ಶಕ್ತಿ ನೀಡೋಣವೆಂದು ಗೊರ್ಲತ್ತು ಗ್ರಾಮದ ಹಿರಿಯ ಮುಖಂಡ, ಎಪಿಎಂಸಿ ಮಾಜಿ ನಿರ್ದೇಶಕ ಮಹಲಿಂಗಪ್ಪ ತಿಳಿಸಿದರು.
ತಾಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರ್ಲತ್ತು ಗ್ರಾಮಕ್ಕೆ ಶಾಸಕ ಟಿ.ರಘುಮೂರ್ತಿಯವರು ಮತಯಾಚನೆ ಮಾಡಲು ಬಂದ ಸಂದರ್ಭದಲ್ಲಿ ಬೃಹತ್ ಹೂವಿನ ಹಾರ ಹಾಕಿ ಸ್ವಾಗತಿಸಿ, ಗ್ರಾಮದ ಪರವಾಗಿ ಟಗರಿನ ಮರಿ ನೀಡಿ ಸನ್ಮಾನಿಸಲಾಯಿತು. ಗೊರ್ಲತ್ತು ಗ್ರಾಮವೂ ಸೇರಿದಂತೆ ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಹಲವಾರು ರೀತಿಯ ಸೌಲಭ್ಯ ನೀಡಿದ್ಧಾರೆ. ಗ್ರಾಮೀಣ ಭಾಗದ ಮಣ್ಣು ರಸ್ತೆಗಳು ಕಾಂಕ್ರಿಟ್ನಿಂದ ಕಂಗೊಳಿಸುತ್ತಿವೆ. ಕ್ಷೇತ್ರದ ಬದಲಾವಣೆಗೆ ತಮ್ಮನ್ನು ತಾವೇ ತೊಡಗಿಸಿಕೊಂಡ ಧೀಮಂತ ವ್ಯಕ್ತಿ ಎಂದು ತಿಳಿಸಿದರು.
ಶಾಸಕ ಟಿ.ರಘುಮೂರ್ತಿ ಮಾತನಾಡಿ, ಮತದಾರರ ಶುಭ ಹಾರೈಕೆಯಿಂದ ಈ ಚುನಾವಣೆಯಲ್ಲೂ ಸಹ ಹೆಚ್ಚಿನ ಲೀಡ್ ಪಡೆದು ಆಯ್ಕೆಯಾಗುತ್ತೇನೆಂಬ ವಿಶ್ವಾಸ ನನಗಿದೆ. ಜನರ ಭಾವನೆಯನ್ನು ಅರಿತುಕೊಂಡು ನನ್ನ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ ಗ್ರಾಮದ ಎಲ್ಲರಿಗೂ ನಾನು ಅಬಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲೂ ಸಹ ಇನ್ನೂ ಉತ್ತಮ ಅಭಿವೃದ್ದಿ ಕೈಗೊಳ್ಳಲು ಪ್ರಯತ್ನಿಸುವೆ. ದಯಮಾಡಿ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಅಭಿವೃದ್ದಿಗೆ ಶಕ್ತಿ ನೀಡಿ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ಮೂರ್ತಿ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರಸ್ವಾಮಿ, ಕಿಸಾನ್ ಸೇಲ್ ಜಿಲ್ಲಾಧ್ಯಕ್ಷ ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಪರಶುರಾಮಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಗೀತಾಬಾಯಿ, ಎಚ್.ಆಂeನೇಯ, ಮಲ್ಲೇಶಪ್ಪ, ಕೆಂಚಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ, ಎನ್.ಮಂಜುನಾಥ, ಜೈರಾಂ, ಗೋವರ್ಧನ್ ಮುಂತಾದವರು ಉಪಸ್ಥಿತರಿದ್ದರು.