i
ಡಿಪ್ಲೊಮಾ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ರೈತ ತರಬೇತಿ ಸಂಸ್ಥೆ, ಸಮೇತಿ (ದಕ್ಷಿಣ), ವಿಸ್ತರಣಾ ನಿರ್ದೇಶನಾಲಯ, ಬೆಂಗಳೂರು, ಮ್ಯಾನೇಜ್, ಹೈದರಾಬಾದ್ ಮತ್ತು ಕೃಷಿ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಂಯುಕ್ತಾಶ್ರಯದಲ್ಲಿ “ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ (ದೇಸಿ)” ಪ್ರಮಾಣ ಪತ್ರ ವಿತರಣಾ ಸಮಾರಂಭವು ಮೇ 8 ರಂದು ಬೆಳಿಗ್ಗೆ 11.00 ಗಂಟೆಗೆ ಡಾ|| ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಭವನ, ಕೃವಿವಿ, ಜಿಕೆವಿಕೆ, ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ ಕುಲಪತಿ ಡಾ: ಎಸ್.ವಿ. ಸುರೇಶರವರು ನೇರವೇರಿಸಲಿದ್ದಾರೆ. ಡಾ: ವಿ.ಎಲ್. ಮಧುಪ್ರಸಾದ್, ವಿಸ್ತರಣಾ ನಿರ್ದೇಶಕರು ಮತ್ತು ನಿರ್ದೆಶಕರು ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಡಾ: ಎಸ್.ಎಸ್. ಲಲಿತಾರೆಡ್ಡಿ, ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು (ಆತ್ಮ), ಕೃಷಿ ಇಲಾಖೆ, ಬೆಂಗಳೂರು ಜಿಲ್ಲೆ, ಡಾ: ಕೆ. ಶಿವರಾಮು, ಪ್ರಾಧ್ಯಾಪಕರು ಮತ್ತು ಸಂಯೋಜಕರು, ಸಮೇತಿ (ದಕ್ಷಿಣ), ಮತ್ತು ಡಾ:ಬಿ. ಕಲ್ಪನ, ಪ್ರಾಧ್ಯಾಪಕರು ಮತ್ತುರಾಜ್ಯ ನೋಡಲ್ ಅಧಿಕಾರಿ (ದೇಸಿ), ಜಿಕೆವಿಕೆ, ಕೃಷಿ ವಿಶ್ವವಿದ್ಯಾನಿಲಯ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.