i
ಚಿತ್ರದುರ್ಗ-ತುಮಕೂರು ಸೇರಿ ರಾಜ್ಯದ ಹಲವ ಜಿಲ್ಲೆಗಳಲ್ಲಿ ಮೇ-13ರವರೆಗೆ ಆಲಿಕಲ್ಲು ಸಹಿತ ಭಾರೀ ಮಳೆ..
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬದಲಾದ ಹವಾಮಾನ ಹಿನ್ನೆಲೆಯ ಅಂಗವಾಗಿ ಬಂಗಾಳಕೊಲ್ಲಿಯಲ್ಲಿ ‘ಮೋಚಾ‘ ಚಂಡಮಾರುತ ಸೃಷ್ಟಿಯಾಗಿದ್ದು ಮುಂದಿನ ಮೇ 13ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಮೇ 7 ಮತ್ತು 8 ರಂದು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳ ಮತ್ತು ಪುದುಚೇರಿಯಲ್ಲಿ ಮೇ 7 ರಿಂದ 10 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡು, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಗಳಿವೆ.
ಮೇ 8 ಹಾಗೂ 9 ರಂದು ಮಂಡ್ಯ, ದೊಡ್ಡಬಳ್ಳಾಪುರ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಹಾವೇರಿ, ಉಡುಪಿ, ಬೆಂಗಳೂರು ನಗರ,ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ಗದಗ, ತುಮಕೂರು, ಕೋಲಾರದಲ್ಲಿ ಮಳೆಯಾಗಲಿದೆ.ಮೇ 10ರಂದು ದಾವಣಗೆರೆ, , ಕೊಡಗಿನಲ್ಲಿ ಮಾತ್ರ ಭಾರೀ ಮಳೆ ಬೀಳಲಿದ್ದು, ಮೇ 12. 13ರಂದು ಹಾಸನ, ಬಾಗಲಕೋಟೆಯ ದಕ್ಷಿಣ, ಮಂಡ್ಯದ ದಕ್ಷಿಣ, ತುಮಕೂರು ದಕ್ಷಿಣ, ಮಂಡ್ಯ, ಚಾಮರಾಜನಗರದ ದಕ್ಷಿಣ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು, ಮೈಸೂರಿನ ಪಶ್ಚಿಮ ಭಾಗ ಹಾಗೂ ಬೆಳಗಾವಿಯ ದಕ್ಷಿಣ, ಹಾವೇರಿಯಲ್ಲಿ ಮಳಡಯಾಗಲಿದೆ. ಮೇ 14ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿಯ ದಕ್ಷಿಣ, ಕೊಡಗು, ಹಾವೇರಿ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಹಾಸನ, ಸೇರಿ ಹಲವು ಕಡೆ ಮಳೆಯಾಗಲಿದೆ.