i
ಸಿಎಂ,ಮಾಜಿ ಸಿಎಂ ಸಮ್ಮುಖದಲ್ಲಿ ಬಿಜೆಪಿಯ ಮಹತ್ವದ ಸಭೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸಭಾ ಚುನಾವಣೆ ಫಲಿತಾಂಶ ಮೇ.13 ರಂದು ಪ್ರಕಟವಾಗಲಿದ್ದು ಒಂದು ವೇಳೆ ಬಹುಮತ ಬಾರದಿದ್ದರೆ ಮುಂದೇನು ಎನ್ನುವ ವಿಚಾರ ಸೇರಿದಂತೆ ಮತ್ತಿತರ ರಾಜಕೀಯ ವಿಚಾರಗಳ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಔಪಚಾರಿಕವಾಗಿ ಭೇಟಿ ಮಾಡಿ ಗಂಭೀರ ಚರ್ಚೆ ಮಾಡಿದರು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ ಬೈರತಿ ಬಸವರಾಜ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಹಾಜರಿದ್ದರು.