i
ಲಂಚ ಸ್ಪೀಕರಿಸುವಾಗ ಇಂಜಿನಿಯರ್ ಲೋಕಾಯುಕ್ತ ದಾಳಿ, ಇಂಜಿನಿಯರ್ ಬಂಧನ…
ಚಂದ್ರವಳ್ಳಿ ನ್ಯೂಸ್, ಗದಗ:
ಕಾಮಗಾರಿ ಒಂದರ ಬಿಲ್ ಪಾವತಿ ಮಾಡಿಕೊಡಲು ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಕಂಬಿ ಎಣಿಸುತ್ತಿದ್ದಾರೆ.
ಗದಗ ಜಿಲ್ಲೆಯ ಗದಗ ಬೆಟಗೇರಿ ನಗರಸಭೆ ಎಇ ವೀರೇಂದ್ರಸಿಂಗ್ ಪಿ ಕಾಟೇವಾಲ ಅವರು ಗುತ್ತಿಗೆದಾರ ಅಬ್ದುಲ್ ಮನಿಯಾರ್ ನಿಂದ ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.
ಸಿವಿಲ್ ವರ್ಕ್ ಬಿಲ್ ಪಾಸ್ ಮಾಡಲು ಆರೋಪಿ ಎಇ 1.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು, ಲೋಕಾಯುಕ್ತ ಅಧಿಕಾರಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲಂಚ ಪಡೆದು ವಾಹನದಲ್ಲಿ ಇರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ ಪಿ ಸತೀಶ್ ಎಸ್ ಚಿಟಗುಬ್ಬಿ ನೇತೃತ್ವದಲ್ಲಿ ಗದಗ ಸಿಪಿಐ ರವಿ ಪುರುಷೋತ್ತಮ, ಪಿಎಸ್ ಐ ಅಜಿತ್ ಕಲಾದಗಿ ದಾಳಿ ನಡೆಸಲಾಗಿದೆ. ಆರೋಪಿಯ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.