i
ವಿಜ್ಞಾನ ವಿದ್ಯಾರ್ಥಿಗಳಿಗೆ ಕಾರ್ಯಾಗಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ (RRI) ಎಪ್ಪತ್ತೈದನೇ ವಾರ್ಷಿಕೋತ್ಸವ ಹಾಗೂ ಬೆಂಗಳೂರು ಪರಿಸರ ಸಂಘದ (EAB) ಇಪ್ಪತ್ತೈದನೇ ವಾರ್ಷಿಕೋತ್ಸವದ ಅಂಗವಾಗಿ ಪದವಿ ಮತ್ತು ಸ್ನಾತಕೊತ್ತರ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ನಗರ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ (urban management and water conservation) ವಿಷಯದ ಬಗ್ಗೆ ಆನ್ಲೈನ್ ಮೂಲಕ ಒಂದು ದಿನ ಕಾರ್ಯಾಗಾರ ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ “ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ನಗರಗಳು (green cities for sustainable Future) ವಿಷಯದ ಮೇಲೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಲಾಗಿದೆ. ಪ್ರಬಂಧಗಳನ್ನು ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು 2023ರ ಜೂನ್ 1 ರೊಳಗೆ ಬರೆದು ಕಳುಹಿಸಬೇಕು.
ಪ್ರಬಂಧ ಕಳುಹಿಸಲು ನಿಯಮ ಮತ್ತು ಷರತ್ತುಗಳು: ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧಗಳನ್ನು ಬರೆಯುವುದು. ಒಬ್ಬರು ಒಂದು ಭಾಷೆಯಲ್ಲಿ ಪ್ರಬಂಧ ಬರೆಯಲು ಅವಕಾಶವಿರುತ್ತದೆ. ಒಂದು ವೇಳೆ ಎರಡು ಭಾಷೆಯಲ್ಲಿ ಬರೆದರೆ ಒಂದನ್ನು ನಮ್ಮ ವಿವೇಚನೆಯಂತೆ ಆಯ್ಕೆ ಮಾಡಿಕೊಂಡು ಮೌಲ್ಯಮಾಪನ ಮಾಡಲಾಗುತ್ತದೆ. ಪ್ರಬಂಧವು 1000 ಪದಗಳನ್ನು ಮೀರುವಂತಿಲ್ಲ, ಇಂಗ್ಲೀಷ್ನಲ್ಲಿ ಬರೆಯುವವರು –arial font 14 size ಬಳಸಬೇಕು. ಕನ್ನಡದಲ್ಲಿ ಬರೆಯುವವರು-unicide 12 size ಬಳಸಬೇಕು. PDF Format ನಲ್ಲಿ ಮಾತ್ರ ಕಳುಹಿಸಬೇಕು. ಕೃತಿ ಚೌರ್ಯ (plagiarism) ತಿರಸ್ಕರಿಸಲಾಗುವುದು. ಪ್ರಬಂಧದ ಜೊತೆಯಲ್ಲಿ ಕಾಲೇಜಿನ ಗುರುತಿನ ಚೀಟಿ ಕಳುಹಿಸಬೇಕು. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಪ್ರತಿನಿಧಿಗಳಿಗೂ ಇ-ಸರ್ಟಿಫಿಕೇಟ್ ನೀಡಲಾಗುವುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.