i
ಮಾಜಿ ಪ್ರಧಾನಿ ಮಂತ್ರಿ ಎಚ್ ಡಿ ದೇವೇಗೌಡರ 91ನೇ. ಹುಟ್ಟುಹಬ್ಬ ಆಚರಿಸಿದ ಜೆಡಿಎಸ್ ಮುಖಂಡರು…
ಚಂದ್ರವಳ್ಳಿ ನ್ಯೂಸ್ ಹಿರಿಯೂರು:
ಮಾಜಿ ಪ್ರಧಾನಿ ಮಂತ್ರಿ ಎಚ್ ಡಿ ದೇವೇಗೌಡರ 91ನೇ. ಹುಟ್ಟುಹಬ್ಬವನ್ನು ಶ್ರೀ ತೇರು ಮಲ್ಲೇಶ್ವರ ಸ್ವಾಮಿ ಹಾಗೂ ನೇಕ್ ಬೀಬಿ ದರ್ಗಾದಲ್ಲಿ ಹಿರಿಯೂರು ತಾಲೂಕು ಜೆಡಿಎಸ್ ಅಧ್ಯಕ್ಷ ಹನುಮಂತರಾಯಪ್ಪ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು, ಪೂಜೆ ಸಲ್ಲಿಸುವುದರ ಮೂಲಕ ಭಗವಂತ ಹೆಚ್ಚಿನ ಆರೋಗ್ಯ ಆಯಸ್ಸು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.
ನಗರದ ಶ್ರೀ ತೇರು ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಎಚ್ ಡಿ ದೇವೇಗೌಡರ ಹುಟ್ಟು ಹಬ್ಬವನ್ನು ಸಿಹಿ ಹಂಚುವುದರ ಮೂಲಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದರು.
ನಂತರ ಜೆಡಿಎಸ್ ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ ಮಾತನಾಡಿ ವಿಧಾನಸಭಾ ಚುನಾವಣೆಯಲ್ಲಿ ಹಗಲು ಇರುಳಿ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಮುಖಂಡರಿಗೆ ಧನ್ಯವಾದಗಳನ್ನು ತಿಳಿಸಿದರು.
ಈ ಸೋಲನ್ನು ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಲಾಗುತ್ತದೆ. ಸಂಘಟನೆ ಮೂಲಕ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ನಡೆಯಲಿರುವ ಜಿಪಂ, ತಾಪಂ ಚುನಾವಣೆಯಲ್ಲಿ ಹೆಚ್ಚಿನ ಸಾಧನೆ ಮಾಡಲಾಗುತ್ತದೆ ಎಂದು ಹೇಳಿದರು.
ಕ್ಷೇತ್ರದ ಸರ್ವಾಂಗೀಣಿ ಅಭಿವೃದ್ಧಿಗಾಗಿ ವಿರೋಧಪಕ್ಷವಾಗಿ ದಲಿತ ಹಿಂದುಳಿದ ವರ್ಗ ಅಲ್ಪಸಂಖ್ಯಾತರು ರೈತರು ಬಡವರ ಏಳಿಗೆಗಾಗಿ ಶ್ರಮಿಸುತ್ತೇವೆ. ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ. ಪ್ರಭುಗಳು ಹಾಗಾಗಿ ಪ್ರಜೆಗಳು ನೀಡಿದ ತೀರ್ಪಿಗೆ ತಲೆಬಾಗುತ್ತೇವೆ ಎಂದು ತಿಳಿಸಿದರು.
ನೂತನವಾಗಿ ಆಯ್ಕೆಯಾದ ಡಿ ಸುಧಾಕರ್ ಅವರಿಗೆ ಜೆಡಿಎಸ್ ಪಕ್ಷ ಮತ್ತು ಅಭ್ಯರ್ಥಿ ಎಂ.ರವೀಂದ್ರಪ್ಪನವರು ಅಭಿನಂದಿಸಿದ್ದಾರೆಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಶಾಂತಣ್ಣ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಜೆಜೆಯಲ್ಲಿ ಮಂಜುನಾಥ್, ಜೆಡಿಎಸ್ ತಾಲೂಕು ಅಧ್ಯಕ್ಷ. ಹನುಮಂತರಾಯಪ್ಪ, ಉಪಾಧ್ಯಕ್ಷ ಅಂಬಲಗೆರೆ ಹನುಮಂತರಾಯ, ಕೇಶವ್ ಮೂರ್ತಿ, ಎಂ ಡಿ ರಮೇಶ್, ಪ್ರಧಾನ ಕಾರ್ಯದರ್ಶಿ ಕರಿಯಣ್ಣ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ್, ಶಿವಶಂಕರಾವ್, ನಾಗೇಶ್, ಸುರೇಶ್, ಬೀರೇನಹಳ್ಳಿ ಹನುಮಂತಪ್ಪ, ರಂಗನಾಥ್, ಮಾಳಗೊಂಡನಹಳ್ಳಿ ಕಾರ್ಯಕರ್ತರು ಅಭಿಮಾನಿಗಳು ನೇಕ್ ಬೇಬಿ ದರ್ಗಾದ ಮುಖ್ಯಸ್ಥರು ಭಾಗವಹಿಸಿದ್ದರು.