i
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಹಲವು ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಹಲವು ಶಾಸಕರು ಸಚಿವರಾಗಿ ಮೇ 20 ರಂದು ಶನಿವಾರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಪ್ರಮಾಣ ವಚನ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ.
ಗುರುವಾರ ಸಂಜೆ ನಡೆದ ಸಿಎಲ್ ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಸದ್ಯದಲ್ಲೇ ನೂತನ ಸಚಿವರುಗಳ ಪಟ್ಟಿಯನ್ನು ಜೋಡೆತ್ತುಗಳು ಸಿದ್ದ ಪಡಿಸಿ ಹೈಕಮಾಂಡ್ ಒಪ್ಪಿಗೆ ಪಡೆದು ಹಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಚಿವ ಸ್ಥಾನಕ್ಕಾಗಿ ಹಲವರಿಂದ ಲಾಬಿ ನಡೆಯುತ್ತಿದ್ದಾರೆ. ವರಿಷ್ಠರ ಮೇಲೆ ಒತ್ತಡ ತಂದು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕೆಲವರು ಒತ್ತಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು ಜಾತಿವಾರು, ಪ್ರಾದೇಶಿಕವಾರು ನ್ಯಾಯ ಕೊಡುವಂತೆ ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಿಎಲ್ ಪಿ ನಾಯಕ, ಸಿಎಂ ಸಿದ್ದರಾಮಯ್ಯ ಅವರ ಮನೆಗಳಿಗೆ ಸಚಿವ ಸ್ಥಾನದ ಆಕಾಂಕ್ಷಿಗಳು ಎಡತಾಕಿ ಸಚಿವ ಸ್ಥಾನಕ್ಕಾಗಿ ಹಲವರು ಲಾಬಿ ನಡೆಸುತ್ತಿದ್ದಾರೆ.
ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಜಾತಿವಾರು, ಪ್ರಾದೇಶಿಕವಾರು, ಜಿಲ್ಲಾವಾರು ಸಚಿವ ಸ್ಥಾನಗಳನ್ನು ನೀಡಿ ಸಾಮಾಜಿಕ ನ್ಯಾಯ ನೀಡುವಂತೆ ಹೈಕಮಾಂಡ್ ಕೆಲ ಸೂತ್ರಗಳನ್ನು ಸಿದ್ಧಪಡಿಸಿದೆ ಎನ್ನಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು ಸೇರಿ ಭವಿಷ್ಯದ ಸಚಿವರುಗಳ ಪಟ್ಟಿ ತಯಾರು ಮಾಡಿದ್ದಾರೆ ಎನ್ನಲಾಗಿದೆ.
ಇತ್ತ ಸಿಎಂ ಹಾಗೂ ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲೇ ಹಲವು ಶಾಸಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಾಳಯದಲ್ಲಿ ಲಾಬಿ ಶುರುವಾಗಿದೆ. ಜಾತಿ ಲೆಕ್ಕಾಚಾರದಲ್ಲಿ ಮಂತ್ರಿ ಸ್ಥಾನವನ್ನ ನೀಡಲು ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಗಳು ಶುರುವಾಗಿದೆ.
ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಬಣದಲ್ಲಿ ಮಂತ್ರಿ ಸ್ಥಾನಕ್ಕಾಗಿ ಲಾಬಿ ಆರಂಭಿದ್ದಾರೆ. ಸಿದ್ದರಾಮಯ್ಯ ಅವರು ಸಂಭಾವ್ಯ ಪಟ್ಟಿಯನ್ನ ಹೈಕಮಾಂಡ್ ಗೆ ತೆಗೆದುಕೊಂಡು ಹೋಗಲಿದ್ದಾರೆ ಎನ್ನಲಾಗಿದೆ. ಮೊದಲ ಹಂತದಲ್ಲಿ 25 ಸಚಿವರ ಪ್ರಮಾಣ ವಚನ ನಡೆಯಲಿದ್ದು ಎರಡನೇ ಹಂತದಲ್ಲಿ ಪೂರ್ಣ ಪ್ರಮಾಣದ ಸಚಿವ ಸ್ಥಾನ ಭರ್ತಿಗೆ ಚಿಂತನೆ ನಡೆಸಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಸಂಭಾವ್ಯ ಸಚಿವರ ಪಟ್ಟ-
ಬೆಳಗಾವಿ-ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಬಾಳ್ಕರ್. ಸತೀಶ್ ಜಾರಕಿಹೊಳಿ
ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
ಹಾವೇರಿ – ರುದ್ರಪ್ಪ ಲಮಾಣಿ
ಬಳ್ಳಾರಿ – ತುಕಾರಾಮ್, ನಾಗೇಂದ್ರ
ಚಿತ್ರದುರ್ಗ-ರಘುಮೂರ್ತಿ
ದಾವಣಗೆರೆ- ಶಾಮನೂರು ಶಿವಶಂಕರಪ್ಪ/ ಎಸ್ಎಸ್ ಮಲ್ಲಿಕಾರ್ಜುನ
ಶಿವಮೊಗ್ಗ- ಮಧು ಬಂಗಾರಪ್ಪ
ಚಿಕ್ಕಮಗಳೂರು- ಟಿ.ಡಿ.ರಾಜೇಗೌಡ
ತುಮಕೂರು-ಡಾ. ಜಿ. ಪರಮೇಶ್ವರ್, ಟಿ.ಬಿ.ಜಯಚಂದ್ರ
ಚಿಕ್ಕಬಳ್ಳಾಪುರ-ಸುಬ್ಬಾರೆಡ್ಡಿ
ಕೋಲಾರ- ರೂಪ ಶಶಿಧರ್
ಬಿಜಾಪುರ- ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್
ಕಲಬುರಗಿ – ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್
ರಾಯಚೂರು- ಬಸನಗೌಡ ತುರುವಿಹಾಳ
ಯಾದಗಿರಿ – ಶರಣಪ್ಪ ದರ್ಶನಾಪುರ್
ಬೀದರ್- ರಹೀಮ್ ಖಾನ್, ಈಶ್ವರ್ ಖಂಡ್ರೆ
ಕೊಪ್ಪಳ-ಬಸವರಾಜ ರಾಯರೆಡ್ಡಿ
ಗದಗ- ಹೆಚ್.ಕೆ. ಪಾಟೀಲ್
ಧಾರವಾಡ- ವಿನಯ್ ಕುಲಕರ್ಣಿ, ಸಂತೋಷ್ ಲಾಡ್
ಉತ್ತರ ಕನ್ನಡ- ಭೀಮಣ್ಣ ನಾಯಕ್
ಬೆಂಗಳೂರು-ಕೆಜೆ ಜಾರ್ಜ್/ ರಾಮಲಿಂಗಾ ರೆಡ್ಡಿ, ಎಂ. ಕೃಷ್ಣಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
ಬೆಂಗಳೂರು ಗ್ರಾಮಾಂತರ-ಕೆಚ್ ಮುನಿಯಪ್ಪ
ಮಂಡ್ಯ- ಚೆಲುವರಾಯ ಸ್ವಾಮಿ
ಮಂಗಳೂರು- ಯುಟಿ ಖಾದರ್
ಮೈಸೂರು-ಮಾಹದೇವಪ್ಪ, ತನ್ವೀರ್ ಸೇಠ್
ಚಾಮರಾಜನಗರ- ಪುಟ್ಟರಂಗಶೆಟ್ಟಿ
ಕೊಡಗು- ಎ.ಎಸ್ ಪೊನ್ನಣ್ಣ
ಜಾತಿವಾರು ಲೆಕ್ಕಾಚಾರದಲ್ಲಿ ಮಂತ್ರಿ ಭಾಗ್ಯ!?
ಲಿಂಗಾಯತ: 6, ಒಕ್ಕಲಿಗ: 5, ಮುಸ್ಲಿಂ:3, ಎಸ್ಟಿ: 3, ಎಸ್ಸಿ(ಬಲ): 3 ಎಸ್ಸಿ(ಎಡ): 2, ಬ್ರಾಹ್ಮಣ: 1, ಈಡಿಗ: 1, ರೆಡ್ಡಿ: 2, ಕುರುಬ :1, ಕುಂಚಿಟಿಗ-1