i
2ನೇ ಬಾರಿಗೆ 37ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ, ಮೇ-20 ರಂದು ಪ್ರಮಾಣ ವಚನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2ನೇ ಬಾರಿಗೆ 37ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದು ಮೇ.20ರಂದು ಪ್ರಮಾಣ ವಚನ ಸ್ಪೀಕರಿಸಲಿದ್ದಾರೆ.
ಸಿದ್ದರಾಮಯ್ಯನವರು 1947ರ ಆಗಸ್ಟ್ 3 ರಂದು ಜನಿಸಿದ್ದಾರೆ. ಕರ್ನಾಟಕದ 32ನೇ ಮುಖ್ಯಮಂತ್ರಿಯಾಗಿದ್ದು 2013ರ ಮೇ 13 ರಂದು ಅಧಿಕಾರ ವಹಿಸಿಕೊಂಡು ಐದು ವರ್ಷಗಳ ಕಾಲ ಸಂಪೂರ್ಣ ಅಧಿಕಾರ ನಡೆಸಿದರು. ಇದು ಕೇವಲ ಎರಡನೇ ವ್ಯಕ್ತಿ ಪೂರ್ಣಾವಧಿಗೆ ಅಧಿಕಾರ ಮಾಡಿದವರ ಸಾಲಿಗೆ ಸಿದ್ದರಾಮಯ್ಯ ಸೇರಲಿದ್ದಾರೆ.
ಅವರು ಜೆಡಿಎಸ್ ಪಕ್ಷದಲ್ಲಿದ್ದಾಗ ಉಪ ಮುಖ್ಯಮಂತ್ರಿಯಾಗಿ, ನಂತರ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದ ನಂತರ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದರು.
ಸಿದ್ದರಾಮಯ್ಯ ಹಲವಾರು ವರ್ಷಗಳಿಂದ ವಿವಿಧ ಜನತಾ ಪರಿವಾರದ ಬಣಗಳ ಸದಸ್ಯರಾಗಿದ್ದರು.
ಆರಂಭಿಕ ಜೀವನ- ಮೈಸೂರು ಜಿಲ್ಲೆಯ ತಿ.ನರಸೀಪುರ ಸಮೀಪದ ವರುಣಾ ಹೋಬಳಿಯ ಸಿದ್ದರಾಮನಹುಂಡಿಯಲ್ಲಿ ರೈತ ಕುಟುಂಬದ ಸಿದ್ದರಾಮೇಗೌಡ ಮತ್ತು ಬೋರಮ್ಮ ದಂಪತಿಗೆ 1947ರಲ್ಲಿ ಜನಿಸಿದರು. ಅವರು ಹತ್ತನೇ ವಯಸ್ಸಿನವರೆಗೆ ಯಾವುದೇ ಔಪಚಾರಿಕ ಶಿಕ್ಷಣ ಪಡೆದಿರಲಿಲ್ಲ. 10 ವರ್ಷಗಳ ನಂತರ ಶಿಕ್ಷಣ ಆರಂಭಿಸಿದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಎಲ್.ಎಲ್.ಬಿ. ಪದವಿ ಪಡೆದಿದ್ದಾರೆ. ಮೈಸೂರಿನಲ್ಲಿ ವಕೀಲರಾದ ಚಿಕ್ಕಬೋರಯ್ಯ ಅವರ ಬಳಿ ಜ್ಯೂನಿಯರ್ ವಕೀಲರಾಗಿ ಸಿದ್ದರಾಮಯ್ಯ ವಕೀಲ ವೃತ್ತಿ ಆರಂಭಿಸಿದ್ದರು.
ವೈಯಕ್ತಿಕ ಜೀವನ-
ಸಿದ್ದರಾಮಯ್ಯ ಅವರು ಪಾರ್ವತಿ ಅವರನ್ನು ಮದುವೆಯಾಗಿದ್ದು, ಇಬ್ಬರು ಪುತ್ರರಿದ್ದರು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ ಅವರ ಹಿರಿಯ ಮಗ ರಾಕೇಶ್ ಅಕಾಲಿಕ ಮರಣಕ್ಕೆ ತುತ್ತಾಗಿದ್ದರು. ರಾಜಕೀಯದಲ್ಲಿ ಅವರ ತಂದೆಯ ವಾರಸುದಾರರಾಗಿ ಕಾಣುತ್ತಾರೆ, ೨೦೧೬ ರಲ್ಲಿ ೩೮ ನೇ ವಯಸ್ಸಿನಲ್ಲಿ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. 2ನೇ ಮಗ ಯತೀಂದ್ರ ವೃತ್ತಿಯಲ್ಲಿ ವೈದ್ಯರಾಗಿದ್ದರು. ಆದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ವರುಣಾ ಕ್ಷೇತ್ರದಿಂದ ಗೆದ್ದಿದ್ದರು. ರಾಜಕೀಯ ಜೀವನ- ಮೈಸೂರಿನಲ್ಲಿ ವಕೀಲರಾಗಿದ್ದ ನಂಜುಂಡಸ್ವಾಮಿ ಅವರು ಕಾನೂನು ಪದವೀಧರರಾಗಿ ಜಿಲ್ಲಾ ನ್ಯಾಯಾಲಯಗಳಲ್ಲಿ ಅವರನ್ನು ಗುರುತಿಸಿದಾಗ ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಪ್ರಾರಂಭವಾಯಿತು. ಮೈಸೂರು ತಾಲೂಕಿಗೆ ಸ್ಪರ್ಧಿಸುವಂತೆ ಹೇಳಿದ್ದರಿಂದ ಸ್ಪರ್ಧಿಸಿ ಆಯ್ಕೆಯಾದರು. ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಭಾರತೀಯ ಲೋಕದಳದ ಟಿಕೆಟ್ನಲ್ಲಿ ಸ್ಪರ್ಧಿಸಿದರು ಮತ್ತು 1983ರಲ್ಲಿ 7ನೇ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿದರು. ಇದು ಎಲ್ಲರಿಗೂ ಅಚ್ಚರಿಯ ಗೆಲುವು ಮತ್ತು ಇದು ಅವರಿಗೆ ಹಳೆಯ ಮೈಸೂರು ಪ್ರದೇಶದಲ್ಲಿ ಹೆಸರು ಮತ್ತು ಖ್ಯಾತಿಯನ್ನು ತಂದುಕೊಟ್ಟಿತು. ನಂತರ ಅವರು ಆಡಳಿತಾರೂಢ ಜನತಾ ಪಕ್ಷಕ್ಕೆ ಸೇರಿದರು. ಕನ್ನಡ ಕಣ್ಗಾವಲು ಸಮಿತಿಯ (ಕನ್ನಡ ಕಾವಲು ಸಮಿತಿ) ಮೊದಲ ಅಧ್ಯಕ್ಷರಾದರು. 1985ರ ಮಧ್ಯಂತರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಅದೇ ಕ್ಷೇತ್ರದಿಂದ ಮರು ಆಯ್ಕೆಯಾದರು. ಪಶುಸಂಗೋಪನೆ ಮತ್ತು ಪಶುವೈದ್ಯ ಸೇವಾ ಸಚಿವರಾಗಿ ಸೇವೆ ಸಲ್ಲಿಸಿದರು. ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಸರ್ಕಾರದಲ್ಲಿ ರೇಷ್ಮೆ ಕೃಷಿ, ಪಶುಸಂಗೋಪನೆ ಮತ್ತು ಸಾರಿಗೆಯಂತಹ ವಿವಿಧ ಖಾತೆಗಳನ್ನು ಅವರು ವಿವಿಧ ಹಂತಗಳಲ್ಲಿ ನಿರ್ವಹಿಸಿದರು.
1989ರ ವಿಧಾನಸಭಾ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಎಂ. ರಾಜಶೇಖರ ಮೂರ್ತಿ ವಿರುದ್ಧ ಸಿದ್ದರಾಮಯ್ಯ ಸೋಲು ಅನುಭವಿಸಬೇಕಾಯಿತು. 1992ರಲ್ಲಿ ಸಿದ್ದರಾಮಯ್ಯ ಅವರು ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಎಚ್ಡಿ ದೇವೇಗೌಡರು ಸಿದ್ದರಾಮಯ್ಯ ಅವರನ್ನು ಜನತಾದಳದ ಸೇರಿಸಿಕೊಂಡರು. 1994ರ ನಡೆದ ರಾಜ್ಯ ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆಯಾಗಿ ಹೆಚ್.ಡಿ.ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಹಣಕಾಸು ಸಚಿವರಾದರು. 1999ರ ರಾಜ್ಯ ಚುನಾವಣೆಯಲ್ಲಿ ಸೋತರು. ೨೦೦೪ ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ಅಂದು ಧರಂ ಸಿಂಗ್ ಮುಖ್ಯಮಂತ್ರಿಯಾಗಿದ್ದ ವೇಳೆ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲಾಯಿತು.
ಕಾಂಗ್ರೆಸ್ ಸೇರ್ಪಡೆ- 2005ರಲ್ಲಿ ಮಾಜಿ ಪ್ರಧಾನಮಂತ್ರಿ ಎಚ್ಡಿ ದೇವೇಗೌಡರೊಂದಿಗಿನ ಭಿನ್ನಾಭಿಪ್ರಾಯದ ನಂತರ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಅವರು ಜೆಡಿಎಸ್ ತೊರೆದ ನಂತರ ಹಿಂದುಳಿದ ವರ್ಗಗಳಿಂದ ಸಾಮೂಹಿಕ ಬೆಂಬಲ ಪಡೆದು ಸೋನಿಯಾ ಗಾಂಧಿಯವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆದ ದೊಡ್ಡ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಸೇರಿದರು. 2006ರ ಡಿಸೆಂಬರ್ನಲ್ಲಿ ನಡೆದ ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಎಂ. ಶಿವಬಸಪ್ಪ ವಿರುದ್ಧ ಕೇವಲ 257 ಮತಗಳ ಅಂತರದಲ್ಲಿ ಗೆದ್ದು ಬಂದಿದ್ದರು. ಅಂದು ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿದ್ದರಾಮಯ್ಯ ವಿರುದ್ಧ 257 ಮತಗಳ ಅಂತರದಿಂದ ಗೆಲುವು ಸಾಧಿಸಿದರು. 2008ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಐದನೇ ಬಾರಿಗೆ ಮರು ಆಯ್ಕೆಯಾದರು. ಅವರು 2013ರ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಗೆದ್ದು 7ನೇ ಬಾರಿಗೆ ಮರು ಆಯ್ಕೆಯಾಗುವುದರ ಮೂಲಕ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದರು.
ಆದರೆ 2018ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ಪುತ್ರ ಡಾ.ಯತೀಂದ್ರಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಜಿ.ಟಿ.ದೇವೇಗೌಡರ ವಿರುದ್ಧ ಸೋಲು ಕಂಡಿದ್ದರು. ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ತೀವ್ರ ಸ್ಪರ್ಧೆ ಎದುರಿಸಿ 1696 ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದರು.
ಸಚಿವ ಖಾತೆಗಳು- ಸಿದ್ದರಾಮಯ್ಯನವರ ತಮ್ಮ ರಾಜಕೀಯ ಜೀವನದಲ್ಲಿ ಉಪ ಮುಖ್ಯಮಂತ್ರಿ, ಹಣಕಾಸು ಮಂತ್ರಿ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಮಂತ್ರಿ, ರೇಷ್ಮೆ ಮತ್ತು ಪಶುಸಂಗೋಪನೆ ಸಚಿವರು, ಸಾರಿಗೆ ಸಚಿವರು, ಉನ್ನತ ಶಿಕ್ಷಣ ಸಚಿವರು ಸೇರಿದಂತೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು. ಅಲ್ಲದೆ ಮಹತ್ವದ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ 2019ರಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು. ವಿರೋಧ ಪಕ್ಷದ ನಾಯಕರಾಗಿ ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ವಿರುದ್ಧ ಸಮರ ಸಾರಿದ ಇವರು 2010ರಲ್ಲಿ ಬೆಂಗಳೂರಿನಿಂದ ಬಳ್ಳಾರಿಯವರೆಗೆ 320 ಕಿ. ಮೀ. ಪಾದಯಾತ್ರೆ ಮಾಡಿದರು. ಇದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮೈಲುಗಲ್ಲಾಗಿದೆ. ಡಿ. ದೇವರಾಜ ಅರಸು ನಂತರ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರ್ಣಗೊಳಿಸಿದ ಏಕೈಕ ಮುಖ್ಯಮಂತ್ರಿ ಇವರಾಗಿದ್ದಾರೆ. ಮುಖ್ಯಮಂತ್ರಿಯಾದ ನಂತರ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದರು. ಈಗ 37ನೇ ಮುಖ್ಯಮಂತ್ರಿಯಾಗಿ 2ನೇ ಬಾರಿ ಸಿಎಂ ಹುದ್ದೆಯನ್ನು ಮೇ.20ರಂದು ಶನಿವಾರ ವಹಿಸಿಕೊಳ್ಳಲಿದ್ದಾರೆ.