i
ಇ – ಕೆವೈಸಿ ಮಾಡಿಸಲು ಹಿರಿಯೂರು ರೈತರಿಗೆ ಸೂಚನೆ ನೀಡಿದ ಉಲ್ಫತ್ ಜೈಬಾ. ಜೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇ-ಕೆವೈಸಿ ಮಾಡಿಸುವುದು ಕೂಡಾ ಕಡ್ಡಾಯವಾಗಿದ್ದು ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲವೆಂದು ಸಹಾಯಕ ಕೃಷಿ ನಿರ್ದೇಶಕಿ ಉಲ್ಫತ್ ಜೈಬಾ. ಜೆ ತಿಳಿಸಿದ್ದಾರೆ.
ಅನೇಕ ಬಾರಿ ಮನವಿ ಮಾಡಿದರು ಕೆಲವು ರೈತರು ಇ-ಕೆವೈಸಿ ಮಾಡಿಸಿರುವುದಿಲ್ಲ. ಇದು ಕೊನೆಯ ಅವಕಾಶವಾಗಿದ್ದು, ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೋಡಣೆಯಾಗಿರುವ ಮೊಬೈಲ್ ನಂ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ಉಲ್ಫತ್ ಜೈಬಾ. ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.