i
ಸರ್ಕಾರಿ ಕೆಲಸ ದೇವರ ಕೆಲಸ, ಕೈ ಮುಗಿದು ತಲೆ ಬಾಗಿ ಬನ್ನಿ-ರಘುಗೌಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು 8 ಬಾರಿ ಶಾಸಕರಾಗಿದ್ದಾರೆ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಈಗಿನ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನವನ್ನು ಪಡೆದು ಪ್ರಮಾಣ ವಚನ ಸ್ವೀಕರಿಸಿದ ನಂತರ ಈ ಸರ್ಕಾರದ ಆಡಳಿತದಲ್ಲಿ ಜನಪರವಾಗಿ 5 ಗ್ಯಾರಂಟಿ ಸೇವೆಗಳನ್ನು ಅನುಷ್ಟಾನಕ್ಕೆ ತರಲು ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಭಾಗವಹಿಸಲು ವಿಧಾನಸೌಧಕ್ಕೆ ಪ್ರವೇಶ ಮಾಡುವ ಸಂದರ್ಭದಲ್ಲಿ ವಿಧಾನಸೌಧ ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿ ಒಳ ನಡೆಯುವ ಮೂಲಕ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯನವರ ಅಮೃತ ವಾಣಿಯಂತೆ ನಡೆದುಕೊಂಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಘುಗೌಡ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದ ಅವರ ಪೇಜ್ ನಲ್ಲಿ ಬರೆದುಕೊಂಡಿರುವ ರಘು ಗೌಡ, ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ ಇವರು ರಾಜ್ಯದ 2ನೇ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದ ಆ ಸಮಯದಲ್ಲಿ ಜನರಿಂದ ಜನರಿಗಾಗಿ ಇರುವಂತಹ ಪ್ರಜಾಪ್ರಭುತ್ವದ ಸೇವೆಗಳನ್ನು ಜನರಿಗೆ ಮುಟ್ಟಿಸಲು ಒಂದು ಶಕ್ತಿಸೌಧ ರಾಜ್ಯಕ್ಕೆ ಬೇಕು ಎಂಬ ಮಹತ್ವದ ವಿಚಾರದಲ್ಲಿ ಬೆಂಗಳೂರಿನಲ್ಲಿ ವಿಧಾನಸೌಧ ನಿರ್ಮಾಣವನ್ನು ಮಾಡಿದ್ದು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದ ಪ್ರವೇಶದ ದ್ವಾರ ಬಾಗಿಲಿನ ಮೇಲೆ ಸರ್ಕಾರದ ಕೆಲಸ ದೇವರ ಕೆಲಸ ಎಂದು ಕಲ್ಲಿನಲ್ಲಿ ಕೆತ್ತಲಾಗಿದೆ ಈ ಮಹತ್ವದ ವಿಚಾರದ ಅಡಿಯಲ್ಲಿ ಯಶಸ್ಸು ಕಾಣಬೇಕಿದೆ ಎಂಬ ಭಕ್ತಿಯ ಭಾವನೆಗಳ ಮೂಲಕ ವಿಧಾನಸೌಧಕ್ಕೆ ಪ್ರವೇಶ ಪಡೆಯುವ ಮುನ್ನ ಉಪಮುಖ್ಯಮಂತ್ರಿ ಶಿವಕುಮಾರ್ ಅವರು ತಲೆಬಾಗಿ ಮೆಟ್ಟಿಲುಗಳಿಗೆ ನಮಸ್ಕರಿಸಿ ಮುಂದೆ ಸಾಗಿದ್ದಾರೆ. ನಾಡಿನ 6 ಕೋಟಿ ಜನತೆಯ ಶಕ್ತಿಯ ಭಾಗವಾಗಿ ಅಪಾರ ಗೌರವದ ಮನ್ನಣೆ ಪಡೆದು ಈ ವಿಚಾರ ನಾಡಿನಾದ್ಯಂತ ಜನರ ವಿಶ್ವಾಸದ ಮಾತಿನಲ್ಲಿ ಕೇಳಿಬರುತ್ತಿದೆ.
ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಹತ್ವದ ಸಂದೇಶ ಇದು ಸಾರುತ್ತದೆ ಎಂದು ಅವರು ತಿಳಿಸಿದ್ದಾರೆ.