i
5 ಗ್ಯಾರಂಟಿ ಜಾರಿ ವಿಳಂಬ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ್ಞಾನ ಇಲ್ವಾ?…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ ಮಹಾ ಸುಳ್ಳು ಹೇಳಿದೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಭರವಸೆ ನೀಡಿ ಅಧಿಕ್ಕಾರಕ್ಕೆ ಬಂದ ಮೇಲೆ ಮೋಸ ಮಾಡಿದೆ. ಮತ ಪಡೆದು ಅಧಿಕಾರಕ್ಕೆ ಬಂದವರಿಗೆ ಜ್ಞಾನ ಇಲ್ವಾ? 13 ಬಾರಿ ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಎಷ್ಟು ವಿದ್ಯುತ್ ಇದೇ? ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಎಷ್ಟು ಖರ್ಚು ಎಂದು ಗೊತ್ತಿರಲ್ವಾ? ನಿಮಗೆ ಮಾಹಿತಿ ಇಲ್ಲಾ ಅಂದ್ರೆ ಜನರು ನಗಲ್ವಾ? ಎಂದು ಬಿಜೆಪಿ ನಾಯಕ ಗೋವಿಂದ್ ಕಾರಜೋಳ, ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿ ಗೋಷ್ಟಿ ನಡೆಸಿ ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸದೆ ಮೋಸ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಕೆಂಡ ಕಾರಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನಲ್ಲಿ ಮಹಿಳೆಯರಿಗೆ ಫ್ರೀ ಬಸ್ ಪಾಸ್ ಎಂದು ಭರವಸೆ ನೀಡಿ, ಈಗ ದಾರಿಯಲ್ಲಿ ಹೋಗುವವರಿಗೆಲ್ಲ ಉಚಿತ ಬಸ್ ಪಾಸ್ ನೀಡಲು ಆಗಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ್ಞಾನ ಇಲ್ವಾ? 13 ಬಾರಿ ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಎಷ್ಟು ವಿದ್ಯುತ್ ಇದೇ? ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಎಷ್ಟು ಖರ್ಚು ಎಂದು ಗೊತ್ತಿರಲ್ವಾ? ನಿಮಗೆ ಮಾಹಿತಿ ಇಲ್ಲಾ ಅಂದ್ರೆ ಜನರು ನಗಲ್ವಾ? ಎಂದು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.