i
ಶಾಸಕ ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ ಆರನಾ ಸಂದೀಪ್…
ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ. ಜಯಚಂದ್ರಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ತೀವ್ರ ಬೇಸರಗೊಂಡಿರುವ ಜಯಚಂದ್ರ ಅವರ ಮೊಮ್ಮಗಳು ಆರನಾ ಸಂದೀಪ್ ರಾಹುಲ್ ಗಾಂಧಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.
ತಾತ ಜಚಯಂದ್ರ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮೊಮ್ಮಗಳಾದ ಆರನಾ ಸಂದೀಪ್ ಬೇಸರಗೊಂಡು ರಾಹುಲ್ಗೆ ಪತ್ರ ಬರೆದಿದ್ದಾರೆ. ಅಲ್ಲದೆ ವಿಡಿಯೋದಲ್ಲಿ ಮಾತನಾಡಿರುವ ಆರನಾ, ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ. ಅವರು ಹಾರ್ಡ್ ವರ್ಕ್ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡಿ. ಜನರಿಗೆ ತುಂಬಾ ಪ್ರೀತಿ ಕೊಟ್ಟು, ಸಹಾಯ ಮಾಡ್ತಾರೆ ಎಂದು ಟಿ.ಬಿ. ಜಯಚಂದ್ರ ಮೊಮ್ಮಗಳು ಆರನಾಳಿಂದ ಭಾವನಾತ್ಮಕ ವಿಡಿಯೋ ರವಾನೆ ಮಾಡಲಾಗಿದೆ. ರಾಹುಲ್ ಗಾಂಧಿಗೆ ವಿಡಿಯೋ ಹಾಗೂ ಪತ್ರದ ಮುಖೇನ ಭಾವನಾತ್ಮಕ ಮನವಿ ಮಾಡಿದ್ದು ಗಮನ ಸೆಳೆದಿದೆ.