i
ಪುತ್ರಿಯ ಹುಟ್ಟು ಹಬ್ಬಕ್ಕೆ ಸರ್ಕಾರಿ ಆದೇಶ ಹೊರಡಿಸಿದ ಕುಲಪತಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಸರ್ಕಾಕದ ಲೆಟರ್ ಹೆಡ್ ದುರ್ಬಳಿಕೆ ಮಾಡಿಕೊಂಡು ಕುಲಪತಿಯೊಬ್ಬರು ಆಹ್ವಾನ ನೀಡಿರುವುದಕ್ಕೆ ತೀವ್ರ ಆಕ್ಷೇಪಗಳು ವ್ಯಕ್ತವಾಗಿದೆ. ಯಾವುದೇ ರಾಜಕಾರಣಿ ಆಗಿರಲಿ ಸರ್ಕಾರಿ ಉನ್ನತ ಅಧಿಕಾರಿಯೇ ಆಗಿರಲಿ ತಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಖಾಸಗಿಯಾಗಿಯೇ ಆಹ್ವಾನ ನೀಡುತ್ತಾರೆ. ಆದರೆ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಬಿ.ಪಿ.ವೀರಭದ್ರಪ್ಪ ತಮ್ಮ ಮಗಳ ಹುಟ್ಟು ಹಬ್ಬಕ್ಕೆ ಸರ್ಕಾರದ ಲೆಟರ್ ಹೆಡ್ ನಲ್ಲಿ ಆಹ್ವಾನಿಸಿ ಸುತ್ತೋಲೆ ಹೊರಡಿಸುವ ಮೂಲಕ ಎಡವಟ್ಟು ಮಾಡಿದ್ದಾರೆ.
ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಒಂದಲ್ಲೊಂದು ತಪ್ಪುಗಳನ್ನು ಎಸಗಿ ಸದಾ ಸುದ್ದಿಯಲ್ಲಿರುತ್ತಾರೆ. ಈಗ ಪುತ್ರಿಯ ಹುಟ್ಟುಹಬ್ಬಕ್ಕೆ ಲೋಗೋ ಇರುವ ಸರ್ಕಾರಿ ಲೆಟರ್ ಹೆಡ್ ನಲ್ಲಿ ಸುತ್ತೋಲೆ ಹೊರಡಿಸಿರುವ ಅವರು ಎಲ್ಲಾ ನೌಕರ ಸಿಬ್ಬಂದಿಗಳು ಖುದ್ದಾಗಿ ಹಾಜರಾಗುವಂತೆ ಫರ್ಮಾನು ರೀತಿಯಲ್ಲಿ ಆದೇಶ ಮಾಡುವ ಮೂಲಕ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ.
ಕುಲಪತಿ ಬಿಪಿ ವೀರಭದ್ರಪ್ಪ ಬರೆದಿರುವ ಪತ್ರದ ಒಕ್ಕಣೆ ಈ ರೀತಿ ಇದೆ. ನನ್ನ ಮಗಳ ಜನ್ಮ ದಿನದ ಪ್ರಯುಕ್ತ ದಿನಾಂಕ 28-05-23 ರ ಮದ್ಯಾಹ್ನ 12.30 ಕ್ಕೆವಿಶ್ವನಿದ್ಯಾನಿಲಯದ ಆವರಣದಲ್ಲಿರವ ಕುಲಪತ್ರಿಗಳ ಗೃಹದಲ್ಲಿ ಸಂತೋಷ ಕೂಟವನ್ನು ಏರ್ಪಡಿಸಿದೆ.
ವಿಶ್ವವಿದ್ಯಾನಿಲಯದ ಎಲ್ಲಾ ಅಧ್ಯಾಪಕರು, ಅದ್ಯಾಪೇಕತರ ನೌಕರರು, ಅತಿಥಿ ಉಪನ್ಯಾಸಕರು, ಏಜೆನ್ಸಿ ನೌಕರರು ತಪ್ಪದೆ ಹಾಜರಾಗಬೇಕೆಂದು ಕೋರಿ ಬರೆಯಲಾಗಿರುವ ಆದೇಶ ಪ್ರತದಲ್ಲಿ ಇದನ್ನ ವೈಯಕ್ತಿಕ ಆಹ್ವಾನವೆಂದು ಭಾವಿಸಿ ಎಲ್ಲರೂ ಸಂತೋಷ ಕೂಟದಲ್ಲಿ ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದ ಎಲ್ಲಾ ವಿಭಾಗಗಳ ಮುಖ್ಯಸ್ಥರಿಗೂ ಸುತ್ತೋಲೆ ಹೊರಡಿಸಿದ್ದಾರೆ. ಸದ್ಯ ಈ ಸುತ್ತೋಲೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ.