i
ಸಚಿವ ಡಿ.ಸುಧಾಕರ್ಗೆ ಅಭಿನಂದನೆ ಸಲ್ಲಿಸಿದ ಶಾಸಕ ಟಿ.ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಚಳ್ಳಕೆರೆಯ ವರಪುತ್ರ, ಹಿರಿಯೂರು ಕ್ಷೇತ್ರದ ಶಾಸಕ ಡಿ.ಸಧಾಕರವರನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಸೇರಿದಂತೆ ಹಲವಾರು ಗಣ್ಯರು ಅಭಿನಂದಿಸಿದರು. ರಾಜಭವನದಲ್ಲಿ ಅಧಿಕಾರ ಸ್ವೀಕಾರ ಸಮಾರಂಭದ ನಂತರ ನೂತನ ಸಚಿವ ಡಿ.ಸುಧಾಕರವರನ್ನು ಭೇಟಿ ನೀಡಿ ಅಭಿನಂದಿಸಿದ ಮಾತನಾಡಿದ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದಿರುವ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಸ್ವಯಂ ಪ್ರೇರಣೆಯಿಂದ ಕಾರ್ಯನಿರ್ವಹಿಸುವ ಛಲ ಹೊಂದಿರುವ ಡಿ.ಸುಧಾಕರವರಿಗೆ ಸಚಿವ ಸ್ಥಾನ ದೊರಕಿರುವುದು ಸಂತೋಷದ ವಿಷಯ. ಚಳ್ಳಕೆರೆ ಕ್ಷೇತ್ರದ ಅಭಿವೃದ್ದಿಯೂ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಸಚಿವರೊಂದಿಗೆ ನಿರಂತರ ಸಹಕಾರ ನೀಡುವುದಲ್ಲದೆ, ಜಿಲ್ಲೆಯನ್ನು ಅಭಿವೃದ್ದಿ ಪಥದತ್ತ ಕೊಂಡ್ಯೊಯಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಸಚಿವ ಡಿ.ಸುಧಾಕರ, ೨೦೦೪ರಲ್ಲಿ ಚಳ್ಳಕೆರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕನಾಗಿ, ೨೦೦೮ರಲ್ಲಿ ಹಿರಿಯೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ, ೨೦೧೩ ಮತ್ತು ೨೦೨೩ರಲ್ಲಿ ಹಿರಿಯೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕನಾಗಿ ಒಟ್ಟು ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ನನ್ನ ರಾಜಕೀಯ ಜೀವನ ಗುರು ಡಿ.ಕೆ.ಶಿವಕುಮಾರ್ ನನಗೆ ಈ ಸ್ಥಾನ ನೀಡಿದ್ದಾರೆ. ವಿಶೇಷವಾಗಿ ಜಿಲ್ಲೆಯ ಎಲ್ಲಾ ಶಾಸಕರ ಮಿತ್ರರು ನನಗೆ ಸಂಪೂರ್ಣ ಸಹಕಾರ ನೀಡುತ್ತಾರೆ. ನಿಮ್ಮೆಲ್ಲರ ಸಹಕಾರದಿಂದ ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದರು.
ಹೊಸದುರ್ಗ ಕ್ಷೇತ್ರದ ಶಾಸಕ ಬಿ.ಜಿ.ಗೋವಿಂದಪ್ಪ, ಕೆಎಂಎಫ್ ನಿರ್ದೇಶಕ ಸಿ.ವೀರಭದ್ರಬಾಬು, ಜಿಲ್ಲಾ ಆರ್ಯವೈಶ್ಯ ಸಂಘದ ಅಧ್ಯಕ್ಷ ಚಿದಾನಂದಗುಪ್ತ, ಆರ್ಯವೈಶ್ಯ ಸಮಾಜದ ಮುಖಂಡರಾದ ಸಿ.ಎಸ್.ಪ್ರಸಾದ್, ವಂದನರಾಜು, ಟಿ.ಮಂಜುನಾಥ, ಹೂವಿನ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.