i
ಕಾರು-ಲಾರಿ ಮಧ್ಯ ಭೀಕರ ರಸ್ತೆ ಅಪಘಾತ, 6 ಮಂದಿ ಧಾರುಣ ಸಾವು…
ಚಂದ್ರವಳ್ಳಿ ನ್ಯೂಸ್, ಕುಷ್ಟಗಿ:
ಕಾರು ಮತ್ತು ಲಾರಿ ಮಧ್ಯ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿ ಹಾಗೂ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮೀಕಾ ಎಂದು ಗುರುತಿಸಲಾಗಿದೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಮೃತ ದೇಹಗಳನ್ನು ಕ್ರೇನ್ ಮೂಲಕ ಹೊರ ತೆಗೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರೆಲ್ಲರೂ ವಿಜಯಪುರ ಮೂಲದವರು ಎನ್ನಲಾಗಿದೆ. ವಿಜಯಪುರದಿಂದ ಕಾರು ಬೆಂಗಳೂರು ಕಡೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.