i
ಸಿಡಿಲು ಬಡಿದು ಮೃತಪಟ್ಟ ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರು ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಡಿಲು ಬಡಿದು ಮೃತಪಟ್ಟ ಕುಟುಂಬದ ಸಂತ್ರಸ್ತರಿಗೆ ಸರ್ಕಾರದಿಂದ ನೀಡುವ 5 ಲಕ್ಷ ರೂ.ಗಳ ಪರಿಹಾರವನ್ನು ವಿತರಣೆ ಮಾಡಿದರು.
ಕಳೆದ ವಾರ ಸಿಡಿಲು ಮತ್ತು ಮಳೆಯಿಂದಾಗಿ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ಭಾಗ್ಯಮ್ಮ ಯರಿಸ್ವಾಮಿ ಇವರು ಸಿಡಿಲು ಬಡಿದು ಮೃತ ಪಟ್ಟಿದ್ದು ಸದರಿ ಸಂತ್ರಸ್ಥರ ಕುಟುಂಬಕ್ಕೆ ಸರ್ಕಾರದಿಂದ ಬಂದಂತಹ 5,00,000 ಲಕ್ಷಗಳ ಪರಿಹಾರ ಮೊತ್ತವನ್ನು ವಿತರಿಸಿದರು.
ಅಲ್ಲದೆ ಮಳೆಯಿಂದಾಗಿ ಪೇಲೂರಹಟ್ಟಿ ಮಜಿರೆ ಹೊಸಕಾಟಪ್ಪನಹಟ್ಟಿ ಗ್ರಾಮದಲ್ಲಿ ಚಂದ್ರಣ್ಣ ಬಿನ್ ಕರಡಿ ಬೋರಯ್ಯ ಇವರಿಗೆ ಸೇರಿದ 5 ಕುರಿ ಹಾಗೂ 1 ಮೇಕೆ ಸಿಡಿಲು ಬಡಿದು ಮೃತ ಪಟ್ಟಿದ್ದು ಕುರಿಗಳ ಮಾಲೀಕರಿಗೆ ಸರ್ಕಾರದಿಂದ ಬಂದಂತಹ 24,000 ರೂ. ಗಳ ಪರಿಹಾರ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಾಲೂಕು ದಂಡಾಧಿಕಾರಿ ನಾಗವೇಣಿ, ಕಂದಾಯ ನಿರೀಕ್ಷಕ ಎಂ ಎನ್ ಸ್ವಾಮಿ ಮತ್ತು ತಾಲೂಕು ಕಚೇರಿ ಅಧಿಕಾರಿಗಳು ಹಾಜರಿದ್ದರು.