i
ಅವೈಜ್ಞಾನಿಕ ಟೋಲ್ ನಿರ್ಮಾಣ, ಹಣ ವಸೂಲಿ ಮಾಡಬೇಡಿ-ಸಚಿವ ಕೆ.ಎನ್.ರಾಜಣ್ಣ…
ಚಂದ್ರವಳ್ಳಿ ನ್ಯೂಸ್, ಕೊರಟಗೆರೆ:
ವಾಹನಗಳ ಮಾಲೀಕರು ಪೆಟ್ರೋಲ್ ಮತ್ತು ಡಿಸೇಲ್ಗೆ ತೆರಿಗೆ ಕಟ್ಟೋದಿಲ್ವಾ. ಸರ್ವಿಸ್ ರಸ್ತೆಯೇ ಇಲ್ಲದೇ ಕೊರಟಗೆರೆ ಕ್ಷೇತ್ರದ ಎರಡು ಕಡೆ ಅವೈಜ್ಞಾನಿಕ ಟೋಲ್ ನಿರ್ಮಾಣ ಮಾಡಿರುವುದು ಎಷ್ಟು ಸರಿ. ಯಾವುದೇ ಕಾರಣಕ್ಕೂ ಜನರಿಂದ ಹಣ ವಸೂಲಿ ಮಾಡದಂತೆ ಟೋಲ್ ವ್ಯವಸ್ಥಾಪಕರಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಸುಪ್ರಸಿದ್ದ ಸಸ್ಯಕಾಶಿಯಾದ ಸಿದ್ದರಬೆಟ್ಟದ ಶ್ರೀಬಾಳೆಹೊನ್ನೂರು ಶಾಖಾ ಶ್ರೀಮಠಕ್ಕೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಲೋಕೋಪಯೋಗಿ ಇಲಾಖೆ ಸಚಿವರ ಜೊತೆ ನಾನೇ ಖುದ್ದಾಗಿ ಮಾತನಾಡಿ ಟೋಲ್ ತೆರವು ಮಾಡಿಸುತ್ತೇನೆ. ಪ್ರವಾಸೋಧ್ಯಮ ನಂಬಿಯೇ ಹತ್ತಾರು ದೇಶಗಳು ಅಭಿವೃದ್ದಿಯ ಪಥದತ್ತಾ ಸಾಗುತ್ತೀವೆ. ಉದ್ಯೋಗ ಸೃಷ್ಟಿಗೆ ಪ್ರವಾಸಿ ಕ್ಷೇತ್ರವು ಹೆಚ್ಚಿನ ಸಹಕಾರಿ ಆಗಲಿದೆ. ಪ್ರವಾಸಿ ಕ್ಷೇತ್ರ ಅಭಿವೃದ್ದಿ ಆದರೇ ಯುವಕರ ಜೀವನಮಟ್ಟ ಸುಧಾರಣೆ ಆಗಲಿದೆ. ತುಮಕೂರು ಜಿಲ್ಲೆಯ ಪ್ರವಾಸಿ ಕ್ಷೇತ್ರದ ಅಭಿವೃದ್ದಿಗೆ ಸರ್ಕಾರದ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ಹೇಳಿದರು.
ಸಿದ್ದರಬೆಟ್ಟ ಶ್ರೀಮಠ ಎಂದರೇ ತುಂಬಾ ಪ್ರೀತಿ ವಿಶ್ವಾಸ ಇದೆ. ಮಧುಗಿರಿ ಕ್ಷೇತ್ರದ ಜನರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಮಾತಿನಂತೆ ನನಗೇ ಸಚಿವ ಸ್ಥಾನ ಸಿಕ್ಕಿದೆ. 5 ವರ್ಷ ಮಧುಗಿರಿ ಕ್ಷೇತ್ರದ ಅಭಿವೃದ್ದಿ ಮತ್ತು ಬಡಜನರ ರಕ್ಷಣೆಗೆ ಇರುತ್ತೇನೆ. ಮಧುಗಿರಿ ಜಿಲ್ಲೆಯ ರಚನೆಗೆ ಶ್ರಮಿಸುತ್ತೇನೆ ಎಂದು ಕೆ.ಎನ್.ರಾಜಣ್ಣ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಮಾಜಿ ಜಿಪಂ ಸದಸ್ಯೆ ಶಾಂತಲಾ ರಾಜಣ್ಣ, ಮುಖಂಡರಾದ ರಾಜ ರವೀಂದ್ರ ನಾಯಕ, ಹನುಮಂತರಾಯಪ್ಪ, ರವೀಶ್, ಗೋವಿಂದರಾಜು, ರಮೇಶ್, ರಾಮಚಂದ್ರಯ್ಯ, ಕೃಷ್ಣಪ್ಪ, ರುದ್ರಮುನಿ, ನಂಜುಂಡಸ್ವಾಮಿ ಸೇರಿದಂತೆ ಇತರರು ಇದ್ದರು.