i
ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರಿಂದ ಜೂ. 02 ರಂದು ವಿವಿಧ ಸಭೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: central minister
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಚಿತ್ರದುರ್ಗ ಸಂಸದರಾದ ಎ. ನಾರಾಯಣಸ್ವಾಮಿ ಅವರು ಜೂ. 02 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿ, ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಜೂ. 02 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಚಿತ್ರದುರ್ಗದ ಮೆಡಿಕಲ್ ಕಾಲೇಜು ಆರಂಭಿಸುವ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಬೆ. 11.30 ಗಂಟೆಗೆ ಇದೇ ಸಭಾಂಗಣದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಭೆಯ ಬಳಿಕ ಸಚಿವರು ಚಿತ್ರದುರ್ಗದಲ್ಲಿನ ತಮ್ಮ ಅಧಿಕೃತ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಮಾಡುವರು ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.