i
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂಪರೇಶ ಸಿದ್ದಪಡಿಸಲು ಶಾಸಕ ಜಯಚಂದ್ರ ಸೂಚನೆ…
ಚಂದ್ರವಳ್ಳಿ ನ್ಯೂಸ್, ಶಿರಾ:
ಶಿರಾ ತಾಲ್ಲೂಕಿನ ಅಭಿವೃದ್ಧಿ ದೃಷ್ಟಿಯಿಂದ ರೂಪುರೇಷೆಗಳನ್ನು ಸಿದ್ದಪಡಿಸಿದ್ದು ಹಂತಹಂತವಾಗಿ ಜಾರಿಗೊಳಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಅವರು ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಮಾತನಾಡಿದರು.
ತಾಲ್ಲೂಕಿನ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಂಡವಾಳ ಹೂಡಿಕೆಯಾಗಲಿದೆ ಆ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆ ಇಂದ ಕೆಲಸ ಮಾಡುವಂತೆ ಸೂಚಿಸಿದರು.
ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ; ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿದ ಶಾಸಕ ಟಿ.ಬಿ.ಜಯಚಂದ್ರ ಪ್ರಾಂಶುಪಾಲ ಮೇಜರ್ ಅನಿಲ್ ಕುಮಾರ್ ಅವರೊಂದಿಗೆ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಹಾಸ್ಟೆಲ್ ಪ್ರಾರಂಭಿಸಲು ಮನವಿ ಸಲ್ಲಿಸಿದರು. ಇದಕ್ಕೆ ಪೂರಕವಾಗಿ ಮುಂದಿನ ತಿಂಗಳಲ್ಲಿ ಹಾಸ್ಟೆಲ್ ಪ್ರಾರಂಭಿಸಲು ಬಿಸಿಎಂ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್ ವಿವೇಕ್ ಶೇಣ್ವೆ, ಗ್ರೇಡ್ 2 ತಹಶೀಲ್ದಾರ್ ಮಂಜುನಾಥ್, ಕಂದಾಯ ತನಿಖಾಧಿಕಾರಿ ಸುದರ್ಶನ್, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಅಬ್ದುಲ್ ಖಾನ್, ನಗರಸಭಾ ಸದಸ್ಯರಾದ ಅಜಯ, ಪೂಜಾ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜ್ ಮುಖಂಡರಾದ ಸಿ.ಅರ್.ಉಮೇಶ್, ಅರೇಹಳ್ಳಿ ರಮೇಶ್, ಗುರುಮೂರ್ತಿ ಗೌಡ, ಗೋಣಿಹಳ್ಳಿ ದೇವರಾಜ್, ವಿನಯ್ ತ್ಯಾಗರಾಜಪ್ಪ, ಪಿ.ಬಿ.ನರಸಿಂಹಯ್ಯ, ಸೀಗಲಹಳ್ಳಿ ವೀರೇಂದ್ರ, ಶ್ಯಾಸಮರು ಮೂರ್ತಿ, ಹರೀಶ್, ಸೋರೆಕುಂಟೆ ಸತ್ಯನಾರಾಯಣ ,ವಿನಾಯಕ್, ಧರಣಿ ಕುಮಾರ್, ವಿಜಯ್, ಮಂಜುನಾಥ್ ಇದ್ದರು.