i
ಕೃಷಿ ಮತ್ತು ರೇಷ್ಮೆ ಕೃಷಿ ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಕೃಷಿ ಮಹಾವಿದ್ಯಾಲಯ, ಮಂಡ್ಯದ ವಿ.ಸಿ. ಫಾರಂ, / ಚಿಂತಾಮಣಿಯ ರೇಷ್ಮೆ ಕೃಷಿ ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ಎರಡು ವರ್ಷಗಳ ಕೃಷಿ ಮತ್ತು ರೇಷ್ಮೆ ಕೃಷಿ ಡಿಪೆÇ್ಲಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇಕಡ 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪ.ಜಾ./ಪ.ಪಂ./ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡ 40 ಅಂಕಗಳು ಪಡೆದಿರಬೇಕು. ರೈತರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇಕಡ 50ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ.
ಸಾಮಾನ್ಯ ವರ್ಗದವರಿಗೆ ಅಭ್ಯರ್ಥಿಗಳಿಗೆ ಶುಲ್ಕ 500/- ರೂಪಾಯಿ, ಹಾಗೂ ಪ.ಜಾ./ಪ.ಪಂ./ಪ್ರವರ್ಗ-1 ರವರಿಗೆ ಶುಲ್ಕ 250/- ನಿಗಧಿಪಡಿಸಲಾಗಿದೆ. Comptroller, UAS, GKVK, Bangalore-560065 ಇವರ ಹೆಸರಿನಲ್ಲಿ ರಾಷ್ಟೀಕೃತ ಬ್ಯಾಂಕ್ಗಳಲ್ಲಿ ಡಿ.ಡಿ.ಯನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು-560065 ರವರಿಗೆ ಜೂನ್ 30, ಸಂಜೆ 4.00 ಗಂಟೆಯೊಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು.
ಹೆಚ್ಚಿನ ವಿವರಗಳಿಗೆ ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು – 560065 ಹಾಗೂ ವೆಬ್ಸೈಟ್ www.uasbangalore.edu.in ನಲ್ಲಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ದೂರವಾಣಿ ಸಂಖ್ಯೆ: 080-23330149ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.