i
ಸಿದ್ದಗಂಗಾ ಶ್ರೀ, ಮಾಜಿ ಸಿಎಂಗಳ ಪೋಟೋಗಳಿಗೆ ಗೇಟ್ ಪಾಸ್, ಕಾಂಗ್ರೆಸ್ ವಿರುದ್ಧ ಎಲ್ಲೆಡೆ ಆಕ್ರೋಶ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ದ್ವೇಷ, ಶತ್ರುಭಾವ ಮೂಡಿಸುವ ಮೂಲಕ ಅಹಂಕಾರದ ಪರಮಾವಧಿ ತಲುಪಿದೆ ಎಂದು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದೆ.
ಬಿಜೆಪಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿ ಸರ್ಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಹೊಂದಿದೆ. ಹಾಗಾಗಿಯೇ ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಕೂಡಲೆ ರಾಜ್ಯದ ಜನತೆಯ ಕ್ಷಮೆ ಕೋರಿ ಪೂಜ್ಯ ಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಲಗತ್ತಿಸಲು ಬಿಜೆಪಿ ಆಗ್ರಹಿಸಿದೆ.
ಸಿದ್ದಗಂಗಾ ಶ್ರೀಗಳ ಜೊತೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರ ಪೋಟೋಗಳಿಗೂ ಕಾಂಗ್ರೆಸ್ ಸರ್ಕಾರ ಗೇಟ್ ಪಾಸ್ ನೀಡುವ ಮೂಲಕ ದ್ವೇಷ ರಾಜಕಾರಣಕ್ಕೆ ಪುಷ್ಠಿ ನೀಡುತ್ತಿದೆ ಎಂದು ಸಾರ್ವಜನಿಕರು ಎಲ್ಲೆಡೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.