i
ಮೈಸೂರು ಎಕ್ಸ್ಪ್ರೆಸ್ ಸೇರಿ ಕೆಲ ರೈಲುಗಳ ಮಾರ್ಗ ಮಧ್ಯ ನಿಯಂತ್ರಣ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ರೈಲ್ವೆ ಮಾರ್ಗಗಳಲ್ಲಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಕೆಲ ಮಾರ್ಗಗಳಲ್ಲಿ ಸಂಚರಿಸುವ ರೈಲುಗಳ ಮಾರ್ಗ ಮಧ್ಯ ನಿಯಂತ್ರಣ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ರೈಲ್ವೆ ಕಚೇರಿ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1. ಜೂನ್ 2, 9 ಮತ್ತು 16 ರಂದು ಬೆಂಗಳೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 06270 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ರೈಲನ್ನು ಮಂಡ್ಯ ವಿಭಾಗ ವ್ಯಾಪ್ತಿಯಲ್ಲಿನ ಎಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಮಾರ್ಗ ಮಧ್ಯದಲ್ಲಿ 60 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
- ಜೂನ್ 2 ರಂದು ಮಂಗಳೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16586 ಮಂಗಳೂರು ಸೆಂಟ್ರಲ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ಪ್ರೆಸ್ ರೈಲನ್ನು ಬೆಳಗುಳ-ಸಾಗರ ಕಟ್ಟೆ ನಿಲ್ದಾಣಗಳ ನಡುವಿನ ತುರ್ತು ಕಾಮಗಾರಿ ನಿಮಿತ್ಯ ಮಾರ್ಗ ಮಧ್ಯದಲ್ಲಿ 80 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.