i
ಅಲೆಮಾರಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿಲು ಅಲೆಮಾರಿ ಒಕ್ಕೂಟ ಆಗ್ರಹ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅಲೆಮಾರಿ ಜನಾಂಗಗಳ ಒಕ್ಕೂಟದ ವತಿಯಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಮಟ್ಟದ ಸಲಹಾ ಸಮಿತಿ ಸದಸ್ಯ ಪ್ರತಾಪ್ ಜೋಗಿ ಅವರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯ ಪ್ರಭು ರವರಿಗೆ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಅಲೆಮಾರಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಮತ್ತು ಅಲೆಮಾರಿ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದಿರುವವರನ್ನು ಗುರುತಿಸಿ ಸನ್ಮಾನಿಸಬೇಕೆಂದು ವಿನಂತಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಅಶೋಕ್ ಬೆಳಘಟ್ಟ, ಇರ್ಫಾನ್ ಉಲ್ಲಾ, ಮನ್ಸೂರ್ ಪಾಷಾ, ಮಹೇಶ್, ರಾಘವೇಂದ್ರ, ಗುರುಪ್ರಸಾದ್, ರಮೇಶ್ ಉಪಸ್ಥಿತರಿದ್ದರು.