i
ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಒತ್ತಾಯ-ಡಾ.ನಿರ್ಮಲಾನಂದನಾಥ ಸ್ವಾಮೀಜಿ….
ಚಂದ್ರವಳ್ಳಿ ನ್ಯೂಸ್, ಆದಿ ಚುಚಂನಗಿರಿ:
ಮಹಿಯರಲ್ಲಿ ಬೌದ್ಧಿಕ, ರಾಜಕೀಯ, ಸಾಮಾಜಿಕ, ಆರ್ಥಿಕ ಬಲ ಹೆಚ್ಚಿಸುವುದಕ್ಕೆ ಪುರುಷರು ಸಹಕಾರ ನೀಡಬೇಕು ಎಂದು ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಆದಿ ಚುಂಚನಗಿರಿಯಲ್ಲಿ ಆಯೋಜಿಸಿದ್ದ ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣಗೊಂಡರೆ ಎಲ್ಲ ಮಹಿಳೆಯರು ಸಶಕ್ತತೆರಾಗುತ್ತಾರೆ. ಸಬಲೀಕರಣ ಶಕ್ತತೆ ಎನ್ನುವುದು ಸಾಮಾನ್ಯವಾಗಿ ಮಹಿಳೆಯರಲ್ಲಿ ಆತ್ಮವಿಶ್ವಾಸ ಬೆಳೆಯಿಸಿ ಅವರ ಸಾಮರ್ಥ್ಯ ಹೆಚ್ಚಿಸುವುದೇ ಆಗಿದೆ. ಅರ್ಹತೆ ಸಾಮರ್ಥ್ಯ ಹೆಚ್ಚಿಸುವುದು, ಲಿಂಗ ಸಮಾನತೆಯ ಅಳವಡಿಸುವುದು ಮಹಿಳೆಯರ ಒಳಗೊಳ್ಳುವಿಕೆ ಮತ್ತು ಚುನಾವಣೆಗೆ ಕೋಟಾವನ್ನು ಹೊಂದಿರುವುದು ಮಹಿಳಾ ಪ್ರಾತಿನಿಧ್ಯಕ್ಕಾಗಿ ಗುರಿಗಳನ್ನು ಸ್ಥಾಪಿಸುವುದು, ಮಹಿಳಾ ಅಭ್ಯರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿ ಮತ್ತು ಅವರಿಗೆ ತರಬೇತಿ ನೀಡಿ ಹೆಚ್ಚಿನ ಮಾಧ್ಯಮ ಮಾನ್ಯತೆ ಮೂಲಕ ಅಭಿಯಾನದಲ್ಲಿ ಮಹಿಳೆಯರ ಉಪಸ್ಥಿತಿಯನ್ನು ಹೆಚ್ಚಿಸಿ ಯೋಜನೆ ಮತ್ತು ಅಭಿವೃದ್ಧಿಯಲ್ಲಿ ಮಹಿಳೆಯರನ್ನು ತೊಡಗಿಸಿಕೊಳ್ಳುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಪ್ರತಿಯೊಬ್ಬರು ದುಡಿಯಬೇಕು ಎಂದು ಶ್ರೀಗಳು ಕರೆ ನೀಡಿದರು.
ಮಹಿಳೆಯರು ಇಂದು ಯಶಸ್ಸಿನ ಮಾಪನವಾಗಿ ಸ್ಪರ್ಧಾತ್ಮಕತೆ ಮತ್ತು ಸ್ವಾವಲಂಬನೆಗೆ ಆದ್ಯತೆ ನೀಡಿದ್ದಾರೆ. ಸಮಾಜದ ಒಲವು ಕೂಡ ಇದೆ ಆಗಿದೆ ಎಂದು ತಿಳಿಸಿದರು.
ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಚುಂಚಾದ್ರಿ ಮಹಿಳಾ ಪ್ರತಿಷ್ಠಾನವನ್ನು ಗಟ್ಟಿಗೊಳಿಸಬೇಕು. ಪ್ರತಿಷ್ಠಾನದ ಅಡಿಯಲ್ಲಿ ಸಮಾಜ ಮಹಿಳೆಯರು ಶಾಖೆಗಳನ್ನು ಆರಂಭಿಸಿ ಮಹಿಳೆಯರು ಬಲಿಷ್ಠವಾಗಿ ಸಂಘಟಿತರಾಗಬೇಕು ಎಂದು ಶ್ರೀಗಳು ಕರೆ ನೀಡಿದರು.
ಪ್ರತಿಷ್ಠಾನ ಮಹಿಳೆಯರ ಅಭಿವೃದ್ಧಿ ಪೂರಕವಾಗಿ ದುಡಿಯಬೇಕು. ರಾಜ್ಯ ಒಕ್ಕಲಿಗರ ಸಂಘದಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಬೇಕು. ಚುಂಚಾದ್ರಿ ಪ್ರತಿಷ್ಠಾನವು ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ಆರ್ಥಿಕ ಸಬಲತೆ ಮೂರು ಉದ್ದೇಶ ಹೊಂದಿದೆ ಎಂದು ತಿಳಿಸಿದರು.
ಒಕ್ಕಲಿಗ ಸಮಾಜದ ಎಲ್ಲ ಸಂಘ ಸಂಸ್ಥೆಗಳು ಒಂದೇ ವೇದಿಕೆಯಡಿ ಒಗ್ಗೂಡಬೇಕು. ಸಮಾಜದ ಒಳಿತಿಗಾಗಿ ಪ್ರತಿಯೊಬ್ಬರು ದುಡಿಯಬೇಕು. ಮಹಿಳೆಯರು ತಮ್ಮ ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು, ಕೌಶಲ್ಯಾಭಿವೃದ್ಧಿ ಹೊಂದಿ ಆರ್ಥಿಕವಾಗಿ ಸದೃಢರಾಗಬೇಕು ಇದಕ್ಕಾಗಿ ಆದಿ ಚುಂಚನಗಿರಿ ಸದಾ ಮಹಿಳೆಯರ ಬೆಂಬಲಕ್ಕೆ ಇರಲಿದೆ ಎಂದು ಶ್ರೀಗಳು ಭರವಸೆ ನೀಡಿದರು.
ಮಹಿಳೆಯರು ಕೇವಲ ಕುಟುಂಬ, ಆರ್ಥಿಕತೆ, ರಾಜಕೀಯ ಎನ್ನದೆ ಆಧ್ಯಾತ್ಮೀಕ ಭಾವನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಹಾಗೂ ಒಕ್ಕಲಿಗರ ಸಂಘದ ದಂತ ಮಹಾ ವಿದ್ಯಾಲಯದ ಅಧ್ಯಕ್ಷ ಬೇತೂರು ಪಾಳ್ಯ ಜೆ.ರಾಜು ಮಾತನಾಡಿ ಚಿತ್ರದುರ್ಗ ಜಿಲ್ಲೆಯ ಗಾಯಿತ್ರಿ ಮಹೇಶ್ ಅವರು ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನದ ಚಿತ್ರದುರ್ಗ ಜಿಲ್ಲಾ ಶಾಖೆಯ ನಿರ್ದೇಶಕರಾಗಿ ಆಯ್ಕೆಯಾಗಿರುತ್ತಾರೆಂದು ತಿಳಿಸಿದರು.
ಅಲ್ಲದೆ ಹಿರಿಯೂರು ತಾಲೂಕಿನ ಕುರುಬರಹಳ್ಳಿ ಕುಸುಮಾ, ಕಾರ್ಪರಹಳ್ಳಿ ವಾಣಿ, ಲತಾ ವಸಂತ್, ಪ್ರೇಮಾ, ಶೋಭಾ ರಘು, ವನಜಾ ರಾಜು, ಸೂಗೂರು ಭಾಗ್ಯಮ್ಮ, ಲಕ್ಷ್ಮಿದೇವಿ ಏಕಾಂತಪ್ಪ, ಸುಧಾ ಹರೀಶ್, ಖಂಡೇನಹಳ್ಳಿ ಕಲ್ಪನಾ, ಹುಲಗಲಕುಂಟೆ ಕಲ್ಪನಾ ಇವರ ನೇತೃತ್ವದಲ್ಲಿ ಮಹಿಳೆಯರು ಸಂಘಟಿತರಾಗಿ ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನದ ಅಧ್ಯಕ್ಷೆ ಭಾರತಿ ಶಂಕರ್, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಬೇತೂರು ಪಾಳ್ಯ ಜೆ.ರಾಜು, ಮಂಡ್ಯ ನಿರ್ದೇಶಕ ನಲ್ಲಿಗೆರೆ ಬಾಲು, ಮೈಸೂರು ಗಂಗಾಧರ್, ಸಮಾಜದ ಹಿರಿಯ ಮುಖಂಡರಾದ ಕೆ.ಟಿ.ರುದ್ರಮುನಿ, ಜಿ.ಏಕಾಂತಪ್ಪ, ವಸಂತಕುಮಾರ್, ಒಬ್ಬೂರು ಕುಮಾರ್ ವೇದಿಕೆಯಲ್ಲಿದ್ದರು.
ರಾಜ್ಯದ ಎಲ್ಲ ಜಿಲ್ಲೆಗಳಿಂದ ಒಕ್ಕಲಿಗ ಸಮಾಜದ ಮಹಿಳೆಯರು ಪಾಲ್ಗೊಂಡಿದ್ದರು.