i
ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡ ಮಾಜಿ ಶಾಸಕಿ ಪೂರ್ಣಿಮಾ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ಮಾಜಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ನೆಹರೂ ಮೈದಾನ ಶಾಲೆ ಹತ್ತಿರ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಮಕ್ಕಳಿಗೆ ಸಿಹಿ ಹಂಚುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯರಾದ ಯಶವಂತರಾಜ್, ನಗರಸಭೆ ಸದಸ್ಯ ಪಲ್ಲವ ಚಿರಂಜೀವಿ, ಸರವಣ, ಕೇಶವಮೂರ್ತಿ, ನಿತ್ಯಾನಂದ, ಮಲ್ಲೇಶ್, ಮುಖಂಡರಾದ ಘಾಟ್ ರವಿ, ಹಾಲಪ್ಪ, ಲೋಕೇಶ್, ದೇವರಾಜ್, ಶ್ರೀನಿವಾಸ ಮುಂತಾದವರು ಉಪಸ್ಥಿತರಿದ್ದರು.