i
ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ-ಹೆಚ್.ಡಿ.ರೇವಣ್ಣ…
ಚಂದ್ರವಳ್ಳಿ ನ್ಯೂಸ್, ಸುಬ್ರಹ್ಮಣ್ಯ:
ದೆಹಲಿಯಲ್ಲಿ ಬಿಜೆಪಿ ಜೊತೆ ದೇವೇಗೌಡರು ಮೈತ್ರಿ ಮಾತುಕತೆ ನಡೆಸಿರುವ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವಿಚಾರ ಬಿಟ್ಟರೆ ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಕುಕ್ಕೆ ಸುಬ್ರಹಣ್ಯ ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡುಕೊಳ್ಳುವುದು ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ತಿಳಿಸಿದ ರೇವಣ್ಣನವರು ವಿಧಾನಸಭೆ ಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇವೆ. ಜೆಡಿಎಸ್ ಪಕ್ಷ ಕಟ್ಟಿ ಬೆಳೆಸುತ್ತೇವೆ. ಇವತ್ತೇ ಮುಗಿದು ಹೋಗಲ್ಲ. ಎಲ್ಲರೂ ಸೋತು ಗೆದ್ದಿದ್ದಾರೆ. ದೇವೇಗೌಡರು, ಕುಮಾರಣ್ಣ ಸೇರಿದಂತೆ ಪಕ್ಷದ ಎಲ್ಲ ಮುಂಚೂಣಿ ನಾಯಕರು ಸೇರಿಕೊಂಡು ಮತ್ತೆ ಪಕ್ಷ ಬಲಿಷ್ಠಗೊಳಿಸುತ್ತೇವೆ ಎಂದು ರೇವಣ್ಣ ತಿಳಿಸಿದರು. ರೇವಣ್ಣ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಜೊತೆಗಿದ್ದರು.