i
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಹೊಸ ಪಿಂಚಣಿ ಜಾರಿಗೆ ಭರವಸೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎನ್ ಪಿಎಸ್ ವ್ಯಾಪ್ತಿಯ ಸರ್ಕಾರಿ ನೌಕರರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನ ಭೇಟಿ ಮಾಡಿ ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸಿ ಈ ಹಿಂದೆ ಇದ್ದ ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪಿಯು ಕಾಲೇಜು ಉಪನ್ಯಾಸಕರ ಸಂಘ, ರಾಜ್ಯ ಎನ್ಪಿಎಸ್ ನೌಕರರ ಸಂಘ ಹಾಗೂ ಇತರೆ ಸಂಘಟನೆಗಳ ಪ್ರತಿನಿಧಿಗಳ ನಿಯೋಗದಿಂದ ಸೋಮವಾರ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಉಪಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿ ಕೂಡಲೇ ಜಾರಿ ಮಾಡುವಂತೆ ಒತ್ತಾಯಿಸಿದ್ದಾರೆ.
ಎನ್ ಪಿಎಸ್ ರದ್ದು ಮಾಡುವಂತೆ ಈ ಹಿಂದೆ ಕಾಂಗ್ರೆಸ್ ಹಲವು ನಾಯಕರು ಪ್ರತಿಪಕ್ಷದಲ್ಲಿದ್ದಾಗ ಬೆಂಬಲ ನೀಡಿದ್ದು, ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿಯೂ ಅಧಿಕಾರಕ್ಕೆ ಬಂದರೆ ಎನ್.ಪಿ.ಎಸ್ ರದ್ದು ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆ ಭರವಸೆಯಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಒಪಿಎಸ್ ಜಾರಿಗೊಳಿಸಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಡಿಸಿಎಂ ಅವರಲ್ಲಿ ಒತ್ತಾಯಿಸಿದರು.
ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಎನ್ಪಿಎಸ್ ನೌಕರರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನದಲ್ಲಿದ್ದು, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಹಂತ ಹಂತವಾಗಿ ಬೇಡಿಕೆ ಈಡೇರಿಸಲಾಗುತ್ತದೆ. ಒಂದೇ ಬಾರಿಗೆ ಎಲ್ಲವನ್ನು ಮಾಡಲಾಗುವುದಿಲ್ಲ. ಎಲ್ಲಾ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತೇವೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ನಿಯೋಗಕ್ಕೆ ಡಿಸಿಎಂ ಭರವಸೆ ನೀಡಿದ್ದಾರೆ.