i
ಜೂನ್ 24 ರಂದು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಜಿಲ್ಲಾ ಪ್ರವಾಸ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಇದೇ ಜೂನ್ 24 ರಂದು ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಜೂನ್ 24 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ವರೆಗೆ ಶಿವಮೊಗ್ಗದ ಭದ್ರಾ ಮೇಲ್ದಂಡೆ ಯೋಜನೆಯ ತುಂಗಾದಿಂದ ಭದ್ರಾ ಡ್ಯಾಂ ಹಿನ್ನೀರಿಗೆ ಲಿಫ್ಟ್ ಮತ್ತು ಕಾಲುವೆ ಕಾಮಗಾರಿಗಳ ಪರಿಶೀಲನೆ ನಡೆಸುವರು. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರಗೂ ಮುತ್ತಿನಕೊಪ್ಪದಿಂದ ಭದ್ರಾ ಜಲಾಶಯದ ಪರಿವೀಕ್ಷಣೆ ಹಾಗೂ ವೃತ್ತ ನಂ.01, ಬಿ. ಆರ್.ಪಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಯಿಂದ 4.30 ಗಂಟೆಯವರಗೂ ಶಾಂತಿಪುರ ಮತ್ತು ಬೆಟ್ಟದ ತಾವರಕೆರೆ ಪಂಪ್ ಹೌಸ್ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಗಳ ಪರಿಶೀಲನೆ ನಡೆಸುವರು. ಸಂಜೆ 4.30 ಯಿಂದ ಸಂಜೆ 5.30 ರವರೆಗೂ ಅಜ್ಜಂಪುರ ಬಳಿಯ ವೈ-ಜಂಕ್ಷನ್ ಪರಿವೀಕ್ಷಣೆ ಮಾಡುವರು. ಸಂಜೆ 5.30 ಕ್ಕೆ ಶಿವಮೊಗ್ಗದ ರಸ್ತೆಯ ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸುವರು. ಸಂಜೆ 7 ಗಂಟೆಗೆ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಪರಿವೀಕ್ಷಣೆ ಮಾಡುವರು. ರಾತ್ರಿ 8 ಗಂಟೆಗೆ ಚಳ್ಳಕೆರೆಯಲ್ಲಿ ವ್ಯಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸೋಮಶೇಖರ್ ತಿಳಿಸಿದ್ದಾರೆ.