i
ಜುಲೈ 2ರಂದು ದೂರದರ್ಶನ ಚಂದನವಾಹಿನಿಯಲ್ಲಿ ಸಂವಾದಿತ ಕಾರ್ಯಕ್ರಮ ಪ್ರಸಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಪರಿಧಿಗೆ ಒಳಪಡುವ ಗ್ರಾಹಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿ ವಿಜಯ ಕುಮಾರ್ ಅವರೊಂದಿಗೆ ಸಂವಾದ ನಡೆಸಿರುವ ಬಗ್ಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಇದೇ ಜುಲೈ 2ರಂದು ಸಂಜೆ 6 ಗಂಟೆಯಿಂದ 6.30ರವರೆಗೆ ಪ್ರಸಾರ ಮಾಡಲಾಗುತ್ತಿದೆ.
ಪಕ್ಷಕಾರರು, ವಕೀಲರು ಹಾಗೂ ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿ ಕೆ.ಮನೋಹರ ಕುಮಾರ್ ತಿಳಿಸಿದ್ದಾರೆ.