i
ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹೆಚ್.ಲಕ್ಷ್ಮಣ್ ಅವರ ಸಹೋದರ ಹೆಚ್.ಚಂದ್ರಪ್ಪ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು
ಚಿತ್ರದುರ್ಗ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಜಿಲ್ಲಾ ಭೋವಿ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಲಕ್ಷ್ಮಣ್ ಅವರ ಸಹೋದರ ಹೆಚ್.ಚಂದ್ರಪ್ಪ(54) ನಿಧನರಾಗಿದ್ದಾರೆ. ಮೃತ ಚಂದ್ರಪ್ಪನವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಅವರು ಮಂಗಳವಾರ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಒಂದು ಗಂಡು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಹಿರಿಯೂರು ತಾಲೂಕಿನ ಐಮಂಗಲ ಸಮೀಪದ ಬಂಡ್ಲಾರಹಟ್ಟಿಯಲ್ಲಿ ಜುಲೈ-5ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಹೋದರ ಹೆಚ್.ಲಕ್ಷ್ಮಣ್ ತಿಳಿಸಿದ್ದಾರೆ.