i
ತಂಬಾಕು ಉತ್ಪನ್ನ ಮಾರಾಟಗಾರರಿಗೆ ಪ್ರತ್ಯೇಕ ಪರವಾನಗಿ-ಆಯುಕ್ತೆ ರೇಣುಕಾ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ಹಂತ-ಹಂತವಾಗಿ ಪರವಾನಗಿ ನೀತಿ ಜಾರಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು. ಪಿಬಿ ರಸ್ತೆಯಲ್ಲಿರುವ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶನಿವಾರ ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ಪ್ರತ್ಯೇಕ ಪರವಾನಗಿ ನೀಡುವ ಕುರಿತು ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸರಕಾರದ ಆದೇಶದಂತೆ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀಡಿರುವ ಅವಧಿಯಲ್ಲಿ ಹಂತ-ಹಂತವಾಗಿ ಪರವಾನಗಿ ನೀತಿ ಜಾರಿ ಮಾಡಲಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಪರವಾನಗಿ ನೀಡಲು ಸರಕಾರ ಮುಂದಾಗಿದೆ ಎಂದರು.ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ನಿಧಿ ಪುರಾಣಿಕ್ ಭಾಗವಹಿಸಿದ್ದರು. ತಂಬಾಕು ಮಾರಾಟದ ಪ್ರತ್ಯೇಕ ಪರವಾನಗಿ ಕುರಿತು ಪ್ರಭಾಕರ್, ಮಹಾಂತೇಶ್ ಉಳ್ಳಾಗಡ್ಡಿ ಮಾಹಿತಿ ನೀಡಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಹಾಪೌರ ಬಿ.ಎಚ್. ವಿನಾಯಕ, ಉಪಮೇಯರ್ ಯಶೋಧಾ ದಿಳ್ಳೆಪ್ಪ, ಡಾ.ಜಿ.ಡಿ. ರಾಘವನ್, ಬಿ.ಎಸ್. ಮಂಜುನಾಥ, ಶಿವನಕೆರೆ ಬಸವಲಿಂಗಪ್ಪ, ಡಾ. ಸುಧೀಂದ್ರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸತೀಶ್ ಕಲಹಾಳ್, ಕೆ.ಪಿ. ದೇವರಾಜ್ ಇತರರಿದ್ದರು.