i
ಚಿತ್ರದುರ್ಗ ಜಿಪಂ ಸಿಇಒ ಎಂ.ಎಸ್. ದಿವಾಕರ್ ವಿಜಯನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಮತ್ತೆ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬಿ.ಎಂ.ಆರ್.ಡಿ.ಎ. ಆಯುಕ್ತರಾಗಿ ರಮ್ಯಾ ಎಸ್. , ವಿಜಯನಗರ ಜಿಲ್ಲಾಧಿಕಾರಿಯಾಗಿ ಎಂ.ಎಸ್. ದಿವಾಕರ್, ಯಾದಗಿರಿ ಜಿಲ್ಲಾಧಿಕಾರಿಯಾಗಿ ಡಾ. ಸುಶೀಲಾ ಬಿ., ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವೆಂಕಟೇಶ್ ಟಿ., ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ಭಾರತಿ ಡಿ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.