i
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ…
ಚಂದ್ರವಳ್ಳಿ ನ್ಯೂಸ್, ರಾಮನಗರ:
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯಕ್ಕೆ ಬರ ಮತ್ತು ದರಿದ್ರ ಎರಡು ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು.
ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ದರಿದ್ರ ಮತ್ತು ಬರ ಬರುತ್ತದೆ ಎಂದು ನಾನು ಹೇಳುತ್ತಿಲ್ಲ, ರಾಜ್ಯದ ಜನರೇ ಮಾತನಾಡಿಕೊಳ್ಳುತ್ತಾರೆ, ಅಲ್ಲದೆ ಪ್ರತೀತಿ ಇದೆ, ರಾಜ್ಯದಲ್ಲಿ ಈ ವರ್ಷ ಹಾಗೆ ಆಗಿದ್ದು ಬರಗಾಲ ಶುರುವಾಗಿದೆ ಎಂದು ಹೇಳಿದರು.
ಬಿಜೆಪಿ ಸೇರಿದಂತೆ ಯಾರ ಬಗ್ಗೆ ಕೂಡ ನನಗೆ ಮೃದು ಧೋರಣೆ ಇಲ್ಲ, ಅದನ್ನು ಇಟ್ಟುಕೊಂಡು ನಾನು ಏನು ಮಾಡಲಿ ಎಂದು ತಿಳಿಸಿದರು.